ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಕ್ತ ಆರ್ಥಿಕ ಒಪ್ಪಂದದ ವಿರುದ್ಧ ಕೆಲವು ತಿಂಗಳ ಹಿಂದೆ ದೇಶದಾದ್ಯಂತ ಉಗ್ರ ಪ್ರತಿಭಟನೆ ನಡೆದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಿಂದೆ ಸರಿದಿತ್ತು. ಆದರೆ ಈಗ ಮತ್ತೆ ಒಪ್ಪಂದಕ್ಕೆ ಮುಂದಾಗಿದೆ. ಒಪ್ಪಂದ ಜಾರಿಯಾದರೆ ದೇಶಕ್ಕೆ ವಾರ್ಷಿಕ ಅಂದಾಜು 42 ಸಾವಿರ ಕೋಟಿ ಮೌಲ್ಯದ ಹೈನು, ಕೋಳಿ ಉತ್ಪನ್ನಗಳು, ಟರ್ಕಿಯ ಕೃಷಿ ಉತ್ಪನ್ನಗಳು ಆಮದಾಗುತ್ತವೆ. ಇದರಿಂದ ದೇಶದ ಲಕ್ಷಾಂತರ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.