‘ಪಾಕಿಸ್ತಾನದ ಆಕ್ರಮಣಕಾರರಿಂದ ರಕ್ಷಣೆ ಪಡೆಯಲು ಕಾಶ್ಮೀಕರದ ಜನ ಭಾರತಕ್ಕೆ ತಮ್ಮನ್ನು ಒಪ್ಪಿಸಿಕೊಂಡಿದ್ದರು. 370ನೇ ವಿಧಿಯ ಮೂಲಕ ವಿಶೇಷ ಸ್ಥಾನಮಾನ ಮತ್ತು ಸ್ವಾಯತ್ತತೆಯನ್ನು ಒದಗಿಸಲು ಭಾರತ ಬದ್ಧತೆ ತೋರಿತ್ತು. ಈಗ ಅದನ್ನು ರದ್ದುಪಡಿಸುವ ಮೂಲಕ, ಮೋದಿ ನೇತೃತ್ವದ ಸರ್ಕಾರ ಅಲ್ಲಿನ ಜನರಿಗೆ ದ್ರೋಹ ಬಗೆದಿದೆ’ ಎಂದು ಮುಖಂಡರಾದ ಟಿ.ಜಿ.ವಿಠಲ್, ವಿ.ಎಸ್.ಶಿವಶಂಕರ್, ಜೆ.ಸತ್ಯಬಾಬು ಮತ್ತು ಜೆ.ಚಂದ್ರಕುಮಾರಿ ದೂರಿದರು.