ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವ್ಯಾಪಾರಿಗಳು ಅನೇಕ ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಅವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ಅವರ ಕುಟುಂಬ ಬೀದಿಗೆ ಬೀಳುತ್ತದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ಉಂಟು ಮಾಡಬಾರದು ಎಂದು ನ್ಯಾಯಾಲಯವೇ ಹೇಳಿದೆ. ಹೀಗಿರುವಾಗ ಅವರನ್ನು ತೆರವುಗೊಳಿಸಿದರೆ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುತ್ತದೆ‘ ಎಂದರು.