<p><strong>ಹೊಸಪೇಟೆ:</strong> ‘ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡುವ ಬದಲು ಪುಸ್ತಕ ಕೊಡಬೇಕು’ ಎಂದು ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.</p>.<p>ಕರ್ನಾಟಕ ಕಲಾಭಿಮಾನ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಾಡಿನ ಕಲೆ, ಸಂಸ್ಕೃತಿ ಬೆಳೆಯಬೇಕು. ಅದು ಮಕ್ಕಳಿಂದ ಸಾಧ್ಯ. ಹಾಗಾಗಿ ಅವರಲ್ಲಿ ಓದುವ ಸಂಸ್ಕೃತಿ ಬೆಳೆಸಬೇಕು. ಮೊಬೈಲ್ ವ್ಯಾಮೋಹದಿಂದ ಮಕ್ಕಳು ಓದುವುದು ಕಡಿಮೆಯಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಪೋಷಕರು ಅದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ತಿಳಿಸಿದರು.</p>.<p>‘ಮಕ್ಕಳಿಗೆ ಚಿಕ್ಕಂದಿನಿಂದಲೂ ಕಲೆಯನ್ನು ಆರಾಧಿಸುವ ಗುಣ ಮೂಡಿಸಬೇಕು. ಕಲೆ, ಸಂಸ್ಕೃತಿ ಉಳಿದರಷ್ಟೇ ಕಲಾವಿದರು ಬದುಕುಳಿಯುತ್ತಾರೆ. ಅರ್ಹ ಕಲಾವಿದರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕು’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಮೋಹನ್ ಕುಂಟಾರ್ ಮಾತನಾಡಿ, ‘ಕರ್ನಾಟಕ ಕಲಾಭಿಮಾನ ಸಂಘವು 25 ವರ್ಷಗಳಿಂದ ರಚನಾತ್ಮಕ ಕೆಲಸ ಮಾಡುತ್ತಿದೆ. ಅನೇಕ ಪ್ರತಿಭೆಗಳಿಗೆ ವೇದಿಕೆ ಒದಗಿಸಿದೆ. ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಬದ್ಧವಾಗಿದೆ’ ಎಂದರು.</p>.<p>ಜಾನಪದ ತಜ್ಞ ಪ್ರೊ.ಬಿ.ಆರ್.ಪಾಟೀಲ, ವಾತ್ಸಲ್ಯ ಟ್ರಸ್ಟ್ ಕಾರ್ಯದರ್ಶಿ ಯಶಸ್ಚಿನಿ, ಸಂಘದ ಉಪಾಧ್ಯಕ್ಷ ಶ್ರೀಪತಿ ಆಚಾರ್, ಕೋಶಾಧ್ಯಕ್ಷ ಪಿ.ಸುಂದರನ್, ಕಾರ್ಯದರ್ಶಿ ಬಿ.ವಿ.ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡುವ ಬದಲು ಪುಸ್ತಕ ಕೊಡಬೇಕು’ ಎಂದು ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.</p>.<p>ಕರ್ನಾಟಕ ಕಲಾಭಿಮಾನ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಾಡಿನ ಕಲೆ, ಸಂಸ್ಕೃತಿ ಬೆಳೆಯಬೇಕು. ಅದು ಮಕ್ಕಳಿಂದ ಸಾಧ್ಯ. ಹಾಗಾಗಿ ಅವರಲ್ಲಿ ಓದುವ ಸಂಸ್ಕೃತಿ ಬೆಳೆಸಬೇಕು. ಮೊಬೈಲ್ ವ್ಯಾಮೋಹದಿಂದ ಮಕ್ಕಳು ಓದುವುದು ಕಡಿಮೆಯಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಪೋಷಕರು ಅದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ತಿಳಿಸಿದರು.</p>.<p>‘ಮಕ್ಕಳಿಗೆ ಚಿಕ್ಕಂದಿನಿಂದಲೂ ಕಲೆಯನ್ನು ಆರಾಧಿಸುವ ಗುಣ ಮೂಡಿಸಬೇಕು. ಕಲೆ, ಸಂಸ್ಕೃತಿ ಉಳಿದರಷ್ಟೇ ಕಲಾವಿದರು ಬದುಕುಳಿಯುತ್ತಾರೆ. ಅರ್ಹ ಕಲಾವಿದರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕು’ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಮೋಹನ್ ಕುಂಟಾರ್ ಮಾತನಾಡಿ, ‘ಕರ್ನಾಟಕ ಕಲಾಭಿಮಾನ ಸಂಘವು 25 ವರ್ಷಗಳಿಂದ ರಚನಾತ್ಮಕ ಕೆಲಸ ಮಾಡುತ್ತಿದೆ. ಅನೇಕ ಪ್ರತಿಭೆಗಳಿಗೆ ವೇದಿಕೆ ಒದಗಿಸಿದೆ. ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಬದ್ಧವಾಗಿದೆ’ ಎಂದರು.</p>.<p>ಜಾನಪದ ತಜ್ಞ ಪ್ರೊ.ಬಿ.ಆರ್.ಪಾಟೀಲ, ವಾತ್ಸಲ್ಯ ಟ್ರಸ್ಟ್ ಕಾರ್ಯದರ್ಶಿ ಯಶಸ್ಚಿನಿ, ಸಂಘದ ಉಪಾಧ್ಯಕ್ಷ ಶ್ರೀಪತಿ ಆಚಾರ್, ಕೋಶಾಧ್ಯಕ್ಷ ಪಿ.ಸುಂದರನ್, ಕಾರ್ಯದರ್ಶಿ ಬಿ.ವಿ.ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>