‘ಜಿಲ್ಲೆಯ ಎಲ್ಲಾ ಪಶ್ಚಿಮ ತಾಲ್ಲೂಕುಗಳು ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಹಿಂದುಳಿದಿವೆ. ಬಳ್ಳಾರಿ ಜಿಲ್ಲಾ ಕೇಂದ್ರ ಬಹಳ ದೂರದಲ್ಲಿದೆ. ಹೀಗಾಗಿ ಹೊಸ ಜಿಲ್ಲೆ ರಚಿಸುವುದು ಉತ್ತಮ. ದಶಕದ ಹಿಂದೆಯೇ ವಿಜಯನಗರ ಜಿಲ್ಲೆಯ ಉದಯವಾಗಬೇಕಿತ್ತು. ಆದರೆ, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಅದು ಆಗಲಿಲ್ಲ. ಈಗ ಅದಕ್ಕೆ ಕಾಲ ಕೂಡಿ ಬಂದಿದ್ದು, ಅದರ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.