ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವುದರ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ವಿರೂಪಾಕ್ಷೇಶ್ವರ ದೇಗುಲದ ಪ್ರವೇಶ ದ್ವಾರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಗಮನಕ್ಕೆ ತರದೆ ಖಾಸಗಿಯವರು ವಸ್ತ್ರ ಸಂಹಿತೆಯ ಬ್ಯಾನರ್ ಹಾಕಿದ್ದರು. ಇದು ಭಕ್ತರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಚರ್ಚೆಗೂ ಇಂಬು ನೀಡಿತ್ತು. ಪತ್ರಿಕೆಯಲ್ಲಿ ಬಂದ ವರದಿ ಆಧರಿಸಿ ಶನಿವಾರ ಅದನ್ನು ತೆರವುಗೊಳಿಸಿ ಇಲಾಖೆಯು ಗೊಂದಲಕ್ಕೆ ಇತಿಶ್ರೀ ಹಾಡಿದೆ.