ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ ಪ್ರಕರಣ: ನ್ಯಾಯಾಲಯದ ಆದೇಶಂತೆ ನೈರ್ಮಲ್ಯ ಇಲಾಖೆಯ ಚರ ವಸ್ತಿ ವಶ

Last Updated 15 ಡಿಸೆಂಬರ್ 2020, 9:56 IST
ಅಕ್ಷರ ಗಾತ್ರ

ಹೊಸಪೇಟೆ: ನ್ಯಾಯಾಲಯದ ಆದೇಶದ ಮೇರೆಗೆ ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಬಾಕಿ ಹಣ ಉಳಿಸಿಕೊಂಡಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಚರ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇಲಾಖೆಗೆ ಸೇರಿದ ನಗರದ ಉಪವಿಭಾಗ ಕಚೇರಿಯಲ್ಲಿದ್ದ ಮೂರು ಅಲ್ಮೇರಾ, ನಾಲ್ಕು ಕುರ್ಚಿಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಏನಿದು ಪ್ರಕರಣ?:
‘1996–97ರಲ್ಲಿ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯು ತಾಲ್ಲೂಕಿನ ಹಂಪಾದೇವನಹಳ್ಳಿ, ಜೌಕು ಪ್ರದೇಶದಲ್ಲಿ 22 ರೈತರಿಂದ ಜಮೀನು ಸ್ವಾಧೀನಕ್ಕೆ ತೆಗೆದುಕೊಂಡಿತು. ಆದರೆ, ರೈತರಿಗೆ ಕೊಡಬೇಕಾದ ಹಣ ಪಾವತಿಸಿರಲಿಲ್ಲ. ಈ ಕುರಿತು ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಆನಂದ ಚವ್ಹಾಣ ಅವರು, ಇಲಾಖೆಯ ಚರ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಡಿ. 9ರಂದು ಆದೇಶ ಹೊರಡಿಸಿದ್ದರು. ಅದರಂತೆ ಡಿ. 14ರಂದು ಅಲ್ಲಿರುವ ವಸ್ತುಗಳನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ’ ಎಂದು ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಗುರುಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT