ಏನಿದು ಪ್ರಕರಣ?:
‘1996–97ರಲ್ಲಿ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯು ತಾಲ್ಲೂಕಿನ ಹಂಪಾದೇವನಹಳ್ಳಿ, ಜೌಕು ಪ್ರದೇಶದಲ್ಲಿ 22 ರೈತರಿಂದ ಜಮೀನು ಸ್ವಾಧೀನಕ್ಕೆ ತೆಗೆದುಕೊಂಡಿತು. ಆದರೆ, ರೈತರಿಗೆ ಕೊಡಬೇಕಾದ ಹಣ ಪಾವತಿಸಿರಲಿಲ್ಲ. ಈ ಕುರಿತು ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಚವ್ಹಾಣ ಅವರು, ಇಲಾಖೆಯ ಚರ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಡಿ. 9ರಂದು ಆದೇಶ ಹೊರಡಿಸಿದ್ದರು. ಅದರಂತೆ ಡಿ. 14ರಂದು ಅಲ್ಲಿರುವ ವಸ್ತುಗಳನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ’ ಎಂದು ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಗುರುಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.