ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಾ.ಬಿ.ಆರ್. ಅಂಬೇಡ್ಕರ್ ಅವರು ನಿಧನರಾದಾಗ ಸರ್ಕಾರ ನವದೆಹಲಿಯಲ್ಲೇ ಅವರ ಸಮಾಧಿಗೆ ವ್ಯವಸ್ಥೆ ಮಾಡಿತ್ತು. ಆದರೆ, ಅವರ ಬೆಂಬಲಿಗರು, ಅನುಯಾಯಿಗಳು ಮುಂಬೈನಲ್ಲೇ ಮಾಡಬೇಕು ಎಂದು ಪಟ್ಟು ಹಿಡಿದ ಕಾರಣ ಸರ್ಕಾರ ತನ್ನ ನಿರ್ಧಾರ ಬದಲಿಸಿತು. ಆದರೆ, ಕಾರಜೋಳರು, ನೆಹರೂ ಸರ್ಕಾರ ಅಂಬೇಡ್ಕರ್ ಸಮಾಧಿಗೆ ಜಾಗ ಕೊಡಲಿಲ್ಲ ಎಂದು ಜನರಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ’ ಎಂದರು.