<p><strong>ಹೊಸಪೇಟೆ (ವಿಜಯನಗರ): </strong>ನಗರ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ಶುಕ್ರವಾರ ಈದ್–ಉಲ್–ಫಿತ್ರ್ ಅನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೋವಿಡ್–19 ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಎಲ್ಲ ಈದ್ಗಾ ಮೈದಾನಗಳ ಪ್ರವೇಶ ದ್ವಾರ ಮುಚ್ಚಲಾಗಿತ್ತು. ಮಸೀದಿಗಳಲ್ಲಿ ಮೌಲ್ವಿಗಳು ಸಾಂಕೇತಿಕವಾಗಿ ಪ್ರಾರ್ಥನೆ ನೆರವೇರಿಸಿದರು. ಮುಸ್ಲಿಂರು ಅವರವರ ಮನೆಗಳಲ್ಲೇ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಭೋಜನ ಸವಿದರು.</p>.<p>‘ಕೋವಿಡ್ ಇರುವುದರಿಂದ ಯಾರೂ ಗುಂಪು ಗೂಡಬಾರದು. ಮನೆಗಳಲ್ಲೇ ಹಬ್ಬ ಆಚರಿಸಬೇಕು’ ಎಂದು ಮುಸ್ಲಿಂ ಧರ್ಮಗುರುಗಳು ಮನವಿ ಮಾಡಿಕೊಂಡಿದ್ದರಿಂದ ಯಾರೊಬ್ಬರೂ ಈದ್ಗಾಗಳ ಕಡೆಗೆ ಸುಳಿಯಲಿಲ್ಲ. ಎಲ್ಲ ಈದ್ಗಾ ಮೈದಾನಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.</p>.<p>ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಕೆಲವರು ಅವರ ಬಡಾವಣೆಯಲ್ಲಿ ಬಡವರು, ಭಿಕ್ಷುಕರಿಗೆ ಹಣ್ಣು ವಿತರಿಸಿದರು. ಮತ್ತೆ ಕೆಲವರು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಗುಲಾಬಿ ಹೂ ಕೊಟ್ಟು ಶುಭ ಕೋರಿದರು. ಗ್ರಾಮೀಣ ಭಾಗಗಳಲ್ಲೂ ಮನೆಗಳಿಗಷ್ಟೇ ಹಬ್ಬ ಸೀಮಿತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ನಗರ ಸೇರಿದಂತೆ ತಾಲ್ಲೂಕಿನ ಹಲವು ಭಾಗಗಳಲ್ಲಿ ಶುಕ್ರವಾರ ಈದ್–ಉಲ್–ಫಿತ್ರ್ ಅನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೋವಿಡ್–19 ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಎಲ್ಲ ಈದ್ಗಾ ಮೈದಾನಗಳ ಪ್ರವೇಶ ದ್ವಾರ ಮುಚ್ಚಲಾಗಿತ್ತು. ಮಸೀದಿಗಳಲ್ಲಿ ಮೌಲ್ವಿಗಳು ಸಾಂಕೇತಿಕವಾಗಿ ಪ್ರಾರ್ಥನೆ ನೆರವೇರಿಸಿದರು. ಮುಸ್ಲಿಂರು ಅವರವರ ಮನೆಗಳಲ್ಲೇ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಭೋಜನ ಸವಿದರು.</p>.<p>‘ಕೋವಿಡ್ ಇರುವುದರಿಂದ ಯಾರೂ ಗುಂಪು ಗೂಡಬಾರದು. ಮನೆಗಳಲ್ಲೇ ಹಬ್ಬ ಆಚರಿಸಬೇಕು’ ಎಂದು ಮುಸ್ಲಿಂ ಧರ್ಮಗುರುಗಳು ಮನವಿ ಮಾಡಿಕೊಂಡಿದ್ದರಿಂದ ಯಾರೊಬ್ಬರೂ ಈದ್ಗಾಗಳ ಕಡೆಗೆ ಸುಳಿಯಲಿಲ್ಲ. ಎಲ್ಲ ಈದ್ಗಾ ಮೈದಾನಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.</p>.<p>ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಕೆಲವರು ಅವರ ಬಡಾವಣೆಯಲ್ಲಿ ಬಡವರು, ಭಿಕ್ಷುಕರಿಗೆ ಹಣ್ಣು ವಿತರಿಸಿದರು. ಮತ್ತೆ ಕೆಲವರು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಗುಲಾಬಿ ಹೂ ಕೊಟ್ಟು ಶುಭ ಕೋರಿದರು. ಗ್ರಾಮೀಣ ಭಾಗಗಳಲ್ಲೂ ಮನೆಗಳಿಗಷ್ಟೇ ಹಬ್ಬ ಸೀಮಿತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>