ಕೋವಿಡ್–19 ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಎಲ್ಲ ಈದ್ಗಾ ಮೈದಾನಗಳ ಪ್ರವೇಶ ದ್ವಾರ ಮುಚ್ಚಲಾಗಿತ್ತು. ಮಸೀದಿಗಳಲ್ಲಿ ಮೌಲ್ವಿಗಳು ಸಾಂಕೇತಿಕವಾಗಿ ಪ್ರಾರ್ಥನೆ ನೆರವೇರಿಸಿದರು. ಮುಸ್ಲಿಂರು ಅವರವರ ಮನೆಗಳಲ್ಲೇ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಭೋಜನ ಸವಿದರು.