ಮೂರಂಗಡಿ ವೃತ್ತದಿಂದ ಉದ್ಯೋಗ ಪೆಟ್ರೋಲ್ ಬಂಕ್ ಹಾಗೂ ನಗರಸಭೆ ಕಚೇರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕ ಸಂಚಾರದ ಮೇಲೆ ನಿರ್ಬಂಧ ಹೇರಿ ಜೆ.ಸಿ.ಬಿ.ಯಿಂದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ನಡೆಯಿತು. ಎರಡು ಪ್ರಮುಖ ರಸ್ತೆಗಳಲ್ಲಿ ಸಂಚಾರದ ಮೇಲೆ ನಿರ್ಬಂಧ ಹೇರಿದ್ದರಿಂದ ಮಹಾತ್ಮ ಗಾಂಧಿ ವೃತ್ತದಲ್ಲಿ ಜನದಟ್ಟಣೆ ಉಂಟಾಗಿತ್ತು.