‘ವಿಶ್ವ ಪಾರಂಪರಿಕ ತಾಣ ಹಂಪಿ ನಗರದಿಂದ ಸನಿಹದಲ್ಲೇ ಇದೆ. ನಿತ್ಯ ದೇಶ–ವಿದೇಶಗಳಿಂದ ನೂರಾರು ಜನ ಬರುತ್ತಾರೆ. ಬಸ್ ನಿಲ್ದಾಣ, ಮುಖ್ಯರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ರಸ್ತೆ ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ನಡೆಸಲಾಗುತ್ತಿತ್ತು. ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿತ್ತು. ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಅವುಗಳನ್ನು ತೆರವುಗೊಳಿಸಲಾಗಿದೆ. ಎಲ್ಲರಿಗೂ ಬೇರೆಡೆ ವ್ಯಾಪಾರಕ್ಕೆ ಸ್ಥಳಾವಕಾಶ ಮಾಡಿಕೊಡಲಾಗುವುದು’ ಎಂದು ಎಚ್. ವಿಶ್ವನಾಥ್ ಅವರು ಭರವಸೆ ನೀಡಿದ ನಂತರ ತೆರವಿಗೆ ವ್ಯಾಪಾರಿಗಳು ಸಹಕರಿಸಿದರು.