ಬ್ರಹ್ಮರಥೋತ್ಸವಕ್ಕೆ ಬಿಬಿಎಂಪಿ ಸದಸ್ಯ ಹನುಮಂತಯ್ಯ ಚಾಲನೆ ನೀಡಿದರು. ಪಂಚಾಮೃತ ಅಭಿಷೇಕ, ಗಣಪತಿ ಹೋಮ, ದುರ್ಗಾಹೋಮ, ಉಯ್ಯಾಲೋತ್ಸವ, ಶಯನೋತ್ಸವ ನಡೆದವು. ಪೂಜಾಕುಣಿತ, ಪಟ್ಟದ ಕುಣಿತ ಸೇರಿದಂತೆ ಹಲವಾರು ಕಲಾ ಪ್ರದರ್ಶನಗಳು ಜಾತ್ರಾ ಮಹೋತ್ಸವಕ್ಕೆ ಮೆರಗು ನೀಡಿದವು. ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.