‘ಬಿಜೆಪಿ ವಾಮ ಮಾರ್ಗದಿಂದ, ಬಹಳ ಜಾಣತನ, ನಯವಂಚಕತನದಿಂದ ಕಾಂಗ್ರೆಸ್ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ನಮ್ಮದೇನೂ ಪಾತ್ರವಿಲ್ಲ ಎಂದು ಬಿಜೆಪಿ ಒಂದು ಕಡೆ ಹೇಳುತ್ತಿದೆ. ಆದರೆ, ರಾಜ್ಯಸಭೆ ಸದಸ್ಯ ರಾಜೀವ ಚಂದ್ರಶೇಖರ್ ಅವರಿಗೆ ಸೇರಿದ ವಿಮಾನದಲ್ಲಿ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ. ಬಿ.ಎಸ್. ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅವರು ಅದಕ್ಕಾಗಿಯೇ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.