ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ ಸಸಿಗೆ ನೀರೆರೆದು ಚಾಲನೆ ನೀಡಿದರು. ಬಳಿಕ ಮಾತನಾಡಿ, ‘ಮಿತ ನೀರಿನ ಬಳಕೆ, ಜಲಮೂಲಗಳ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವದಾದ್ಯಂತ ಜಲ ದಿನ ಆಚರಿಸಲಾಗುತ್ತಿದೆ. ಜೀವಸಂಕುಲದ ಉಳಿವಿಗೆ ನೀರು ಅಮೂಲ್ಯ. ಅದು ಬರಿದಾಗುತ್ತಿರುವ ನೈಸರ್ಗಿಕ ಸಂಪರ್ಮೂಲವಾಗಿದ್ದು, ಅದರ ಸಂರಕ್ಷಣೆ ಬಹಳ ಅನಿವಾರ್ಯವಾಗಿದೆ’ ಎಂದು ಹೇಳಿದರು.