ಸಂಡೂರು ತಾಲ್ಲೂಕಿನ ಸೋವೇನಹಳ್ಳಿಯ ನಿವಾಸಿ ಮಹೇಶ ಬಂಧಿತ ಆರೋಪಿ. ಆತ ಶುಕ್ರವಾರ ಬೆಳಿಗ್ಗೆ ಪೋಸ್ಟ್ ಹಾಕಿದ್ದ, ಇದನ್ನು ಗಮನಿಸಿದ ಕೂಡ್ಲಿಗಿ ಡಿವೈಎಸ್ಪಿ ಜಿ. ಹರೀಶ್ ರೆಡ್ಡಿ ತಕ್ಷಣ ಆರೋಪಿಯನ್ನು ಪತ್ತೆ ಹಚ್ಚುವಂತೆ ಗುಡೇಕೋಟೆ ಪೊಲೀಸರಿಗೆ ಸೂಚನೆ ನೀಡಿದ್ದರು. ಇದರಿಂದ ಗುಡೇಕೋಟೆ ಪಿಎಸ್ಐ ಶಂಕರ್ ನಾಯ್ಕ್ ಹಾಗೂ ಸಿಬ್ಬಂದಿ ಸೋವೇನಹಳ್ಳಿಯಲ್ಲಿ ಮಹೇಶನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.