ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ: ಬಂಧನ

Last Updated 22 ಮೇ 2021, 1:42 IST
ಅಕ್ಷರ ಗಾತ್ರ

ಕೂಡ್ಲಿಗಿ: ಫೇಸ್‌ಬುಕ್‌ನಲ್ಲಿ ಒಂದು ಜಾತಿ ವಿರುದ್ಧ ಅವಹೇಳನಕಾರಿಯಾಗಿ ಬರೆದು ಪೊಸ್ಟ್ ಮಾಡಿದ್ದ ಯುವಕನ ವಿರುದ್ದ ಗುಡೇಕೋಟೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ಅತನನ್ನು ಬಂಧಿಸಿದ್ದಾರೆ.

ಸಂಡೂರು ತಾಲ್ಲೂಕಿನ ಸೋವೇನಹಳ್ಳಿಯ ನಿವಾಸಿ ಮಹೇಶ ಬಂಧಿತ ಆರೋಪಿ. ಆತ ಶುಕ್ರವಾರ ಬೆಳಿಗ್ಗೆ ಪೋಸ್ಟ್ ಹಾಕಿದ್ದ, ಇದನ್ನು ಗಮನಿಸಿದ ಕೂಡ್ಲಿಗಿ ಡಿವೈಎಸ್ಪಿ ಜಿ. ಹರೀಶ್ ರೆಡ್ಡಿ ತಕ್ಷಣ ಆರೋಪಿಯನ್ನು ಪತ್ತೆ ಹಚ್ಚುವಂತೆ ಗುಡೇಕೋಟೆ ಪೊಲೀಸರಿಗೆ ಸೂಚನೆ ನೀಡಿದ್ದರು. ಇದರಿಂದ ಗುಡೇಕೋಟೆ ಪಿಎಸ್‍ಐ ಶಂಕರ್ ನಾಯ್ಕ್ ಹಾಗೂ ಸಿಬ್ಬಂದಿ ಸೋವೇನಹಳ್ಳಿಯಲ್ಲಿ ಮಹೇಶನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾತಿ ನಿಂದನೆ ಹಾಗೂ ಜಾತಿ ಜಾತಿ ಮಧ್ಯ ಪರಸ್ಪರ ದ್ವೇಷ ಹರಡಿದ ಆರೋಪದ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಕೂಡ್ಲಿಗಿ ಡಿವೈಎಸ್ಪಿ ಜಿ. ಹರೀಶ್ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT