ಉಪವಿಭಾಗಾಧಿಕಾರಿ ಪಿ.ಎನ್. ಲೋಕೇಶ್ ಪ್ರತಿಕ್ರಿಯಿಸಿ, ‘ಕಾಡಂಚಿನಲ್ಲಿ ಉಳುಮೆ ಮಾಡುವವರ ಬಗ್ಗೆ ಗ್ರಾಮ ಅರಣ್ಯ ಸಮಿತಿಯಲ್ಲಿ ನಿರ್ಧಾರವಾಗಬೇಕು. ರೈತರ ಗಮನಕ್ಕೆ ತಂದು ಜಂಟಿ ಸರ್ವೇ ನಡೆಸಲಾಗುವುದು. ಕಾಲುವೆ, ಕೆರೆ, ಸ್ಮಶಾನಕ್ಕೆ ಸೇರಿದ ಜಾಗವಿದ್ದರೆ ಹಕ್ಕು ಪತ್ರ ನೀಡಲು ಬರುವುದಿಲ್ಲ. ರೈತರಿಗೆ ತೊಂದರೆ ಕೊಡದಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದು ಭರವಸೆ ನೀಡಿದರು.