‘ಜಲಾಶಯದ ಕೆಳಮಟ್ಟದ ಕಾಲುವೆಯನ್ನು (ಎಲ್.ಎಲ್.ಸಿ.) ನೆಚ್ಚಿಕೊಂಡು 1 ಲಕ್ಷ ಎಕರೆಗೂ ಅಧಿಕ ಪ್ರದೇಶದಲ್ಲಿ ರೈತರು ಭತ್ತ, ಬಾಳೆ ಸೇರಿದಂತೆ ಇತರೆ ಬೆಳೆ ಬೆಳೆಯುತ್ತಾರೆ. ಇದರಿಂದ ಹೊಸಪೇಟೆ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಬಳ್ಳಾರಿ ತಾಲ್ಲೂಕಿನ ರೈತರಿಗೆ ಅನುಕೂಲವಾಗುತ್ತದೆ. ಅಣೆಕಟ್ಟೆ ಸಂಪೂರ್ಣ ತುಂಬಿರುವುದರಿಂದ 2020ರ ಏಪ್ರಿಲ್ ಅಂತ್ಯದ ವರೆಗೆ ಎರಡನೇ ಬೆಳೆಗೆ ನೀರು ಹರಿಸಬೇಕು’ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್.