ಹೊಸಪೇಟೆ: ಇಲ್ಲಿನ ಆರ್ಟಿಒ ಕಚೇರಿ ಬಳಿ ತುಂಗಭದ್ರಾ ಜಲಾಶಯದ ಮೇಲ್ಮಟ್ಟದ ಕಾಲುವೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಮೇಲು ಸೇತುವೆ ಸೋಮವಾರ ಸಂಜೆ ಏಕಾಏಕಿ ಕುಸಿದು ಬಿದ್ದಿದೆ.
ಸೇತುವೆಯ ಒಂದು ಭಾಗದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನೊಂದು ಭಾಗದಲ್ಲಿ ಸೋಮವಾರ ಕೆಲಸ ನಡೆಯುತ್ತಿರುವಾಗ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಕೆಲಸ ನಿರ್ವಹಿಸುತ್ತಿದ್ದ 15ರಿಂದ 20 ಜನ ಕಾರ್ಮಿಕರು ಸುರಕ್ಷಿತವಾಗಿದ್ದಾರೆ.
ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಅವರನ್ನು ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.
ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಲೋಕೋಪಯೋಗಿ ಇಲಾಖೆಯು ಅದನ್ನು ನೆಲಸಮಗೊಳಿಸಿ, ಹೊಸ ಸೇತುವೆ ನಿರ್ಮಿಸುತ್ತಿದೆ.