<p>ಹೊಸಪೇಟೆ (ವಿಜಯನಗರ): ವೀರಶೈವ ಲಿಂಗಾಯತ ಸಮಾಜದಿಂದ ಗುರುವಾರ ನಗರದ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದಲ್ಲಿ ಸಮಾಜದ ದುರ್ಬಲ ವರ್ಗದ 190 ಜನರಿಗೆ ₹900 ಮೊತ್ತದ ಆಹಾರ ಧಾನ್ಯ ಒಳಗೊಂಡ ಕಿಟ್ ವಿತರಿಸಲಾಯಿತು.</p>.<p>5 ಕೆ.ಜಿ ಅಕ್ಕಿ, 3 ಕೆ.ಜಿ ಜೋಳ, 3 ಕೆ.ಜಿ ಗೋಧಿ, 1 ಕೆ.ಜಿ ತೊಗರಿ ಬೇಳೆ, 1 ಕೆ.ಜಿ ಸಕ್ಕರೆ, 1 ಕೆ.ಜಿ ಅವಲಕ್ಕಿ, 1 ಕೆ.ಜಿ ರವೆ, 1 ಲೀಟರ್ ಅಡುಗೆ ಎಣ್ಣೆ, ಚಹಾ ಪೌಡರ್, ಸಾಸಿವೆ, ಜೀರಿಗೆ ಒಳಗೊಂಡ 190 ಕಿಟ್ಗಳನ್ನು ಸಮಾಜದ ಅಧ್ಯಕ್ಷ ಶರಣು ಸ್ವಾಮಿ, ಕಾರ್ಯದರ್ಶಿ ರವಿಶಂಕರ್ ವಿತರಿಸಿದರು.</p>.<p>ಆಟೊ ಚಾಲಕರು, ಅಡುಗೆ, ಎಲೆಕ್ಟ್ರಿಶಿಯನ್, ನಿರ್ಮಾಣ ಕಾರ್ಯ ಮಾಡುವವರಿಗೆ ಕಿಟ್ಗಳನ್ನು ವಿತರಿಸಲಾಯಿತು. ಶುಕ್ರವಾರ ನಗರದಲ್ಲಿನ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ, ಕೆಳಹಂತದ ಕೆಲಸದವರಿಗೆ ಆಹಾರದ ಕಿಟ್ ವಿತರಿಸಲಾಗುತ್ತದೆ.</p>.<p>ಕೊಟ್ಟೂರು ಸ್ವಾಮಿ ಕಲ್ಯಾಣ ಕೇಂದ್ರದ ಕಾರ್ಯದರ್ಶಿ ಸಾಲಿ ಸಿದ್ದಯ್ಯ ಸ್ವಾಮಿ, ಲಿಂಗಾಯತ ಸಮಾಜದ ಮುಖಂಡರಾದ ಅಶ್ವಿನ್ ಕೋತಂಬ್ರಿ, ಭಾವಿಕಟ್ಟಿ ಮುರಳಿ, ಮೆಟ್ರಿ ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ವೀರಶೈವ ಲಿಂಗಾಯತ ಸಮಾಜದಿಂದ ಗುರುವಾರ ನಗರದ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದಲ್ಲಿ ಸಮಾಜದ ದುರ್ಬಲ ವರ್ಗದ 190 ಜನರಿಗೆ ₹900 ಮೊತ್ತದ ಆಹಾರ ಧಾನ್ಯ ಒಳಗೊಂಡ ಕಿಟ್ ವಿತರಿಸಲಾಯಿತು.</p>.<p>5 ಕೆ.ಜಿ ಅಕ್ಕಿ, 3 ಕೆ.ಜಿ ಜೋಳ, 3 ಕೆ.ಜಿ ಗೋಧಿ, 1 ಕೆ.ಜಿ ತೊಗರಿ ಬೇಳೆ, 1 ಕೆ.ಜಿ ಸಕ್ಕರೆ, 1 ಕೆ.ಜಿ ಅವಲಕ್ಕಿ, 1 ಕೆ.ಜಿ ರವೆ, 1 ಲೀಟರ್ ಅಡುಗೆ ಎಣ್ಣೆ, ಚಹಾ ಪೌಡರ್, ಸಾಸಿವೆ, ಜೀರಿಗೆ ಒಳಗೊಂಡ 190 ಕಿಟ್ಗಳನ್ನು ಸಮಾಜದ ಅಧ್ಯಕ್ಷ ಶರಣು ಸ್ವಾಮಿ, ಕಾರ್ಯದರ್ಶಿ ರವಿಶಂಕರ್ ವಿತರಿಸಿದರು.</p>.<p>ಆಟೊ ಚಾಲಕರು, ಅಡುಗೆ, ಎಲೆಕ್ಟ್ರಿಶಿಯನ್, ನಿರ್ಮಾಣ ಕಾರ್ಯ ಮಾಡುವವರಿಗೆ ಕಿಟ್ಗಳನ್ನು ವಿತರಿಸಲಾಯಿತು. ಶುಕ್ರವಾರ ನಗರದಲ್ಲಿನ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ, ಕೆಳಹಂತದ ಕೆಲಸದವರಿಗೆ ಆಹಾರದ ಕಿಟ್ ವಿತರಿಸಲಾಗುತ್ತದೆ.</p>.<p>ಕೊಟ್ಟೂರು ಸ್ವಾಮಿ ಕಲ್ಯಾಣ ಕೇಂದ್ರದ ಕಾರ್ಯದರ್ಶಿ ಸಾಲಿ ಸಿದ್ದಯ್ಯ ಸ್ವಾಮಿ, ಲಿಂಗಾಯತ ಸಮಾಜದ ಮುಖಂಡರಾದ ಅಶ್ವಿನ್ ಕೋತಂಬ್ರಿ, ಭಾವಿಕಟ್ಟಿ ಮುರಳಿ, ಮೆಟ್ರಿ ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>