<p><strong>ಹೊಸಪೇಟೆ:</strong> ಎಂ.ಎಸ್.ಪಿ.ಎಲ್. ಹಾಗೂ ಜೈಪುರದ ಭಗವಾನ್ ಮಹಾವೀರ್ ಅಂಗವಿಕಲರ ಸಹಕಾರ ಸಮಿತಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಉಚಿತ ಕೃತಕ ಕಾಲು ಜೋಡಣೆ ಶಿಬಿರ ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ಆರಂಭಗೊಂಡಿತು.</p>.<p>ಶಿಬಿರದ ಮೊದಲ ದಿನವೇ 250 ಜನ ಹೆಸರು ನೋಂದಣಿ ಮಾಡಿಸಿ, ಶಿಬಿರದಲ್ಲಿ ಭಾಗವಹಿಸಿದ್ದರು. ಹುಬ್ಬಳ್ಳಿ, ಬೆಳಗಾವಿ, ರಾಯಚೂರು, ಮೈಸೂರು, ಆಂಧ್ರ ಪ್ರದೇಶದ ಕರ್ನೂಲ್ ಸೇರಿದಂತೆ ವಿವಿಧ ಭಾಗಗಳಿಂದ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.</p>.<p>ಸ್ಥಳದಲ್ಲೇ ಕಾಲಿನ ಅಳತೆ ಪಡೆದು, ಅಲ್ಲಿಯೇ ತಯಾರಿಸುವ ಕೆಲಸ ಮುಂದುವರೆದಿತ್ತು. ಪೋಲಿಯೊ ಸೇರಿದಂತೆ ಇತರೆ ಕಾರಣಗಳಿಂದ ಅಂಗವೈಕಲ್ಯಕ್ಕೆ ಗುರಿಯಾದವರಿಗೆ ಕ್ಯಾಲಿಪರ್ಸ್ಗಳನ್ನು ಅಳವಡಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಇದಕ್ಕೂ ಮುನ್ನ ಎಂ.ಎಸ್.ಪಿ.ಎಲ್. ಬಲ್ದೋಟ ಸಮೂಹ ಸಂಸ್ಥೆಯ ಅಧ್ಯಕ್ಷ ನರೇಂದ್ರ ಬಲ್ದೋಟ ಅವರು ಶಿಬಿರಕ್ಕೆ ಚಾಲನೆ ನೀಡಿದರು. ‘ಸತತ ಎಂಟು ವರ್ಷಗಳಿಂದ ಈ ಶಿಬಿರವನ್ನು ಆಯೋಜಿಸುತ್ತಿದ್ದೇವೆ. ಶಿಬಿರದಲ್ಲಿ ಪಾಲ್ಗೊಳ್ಳುವವರಿಂದ ಯಾವುದೇ ರೀತಿಯ ಶುಲ್ಕ ಪಡೆಯುತ್ತಿಲ್ಲ. ಯಾವ ಭಾಗದವರು, ಯಾರು ಬೇಕಾದರೂ ಶಿಬಿರದಲ್ಲಿ ಭಾಗವಹಿಸಿ ಕೃತಕ ಕಾಲು ಜೋಡಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ಅಂಗವಿಕಲರು ಸ್ವಾವಲಂಬಿಗಳಾಗಿ ಅವರ ಕಾಲ ಮೇಲೆ ಅವರು ನಿಲ್ಲಬೇಕು. ಈ ಹಿಂದಿನ ಶಿಬಿರಗಳಲ್ಲಿ ಭಾಗವಹಿಸಿದವರು ಕೂಡ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯಬಹುದು. ಖಾಸಗಿಯಲ್ಲಿ ಕೃತಕ ಕಾಲು ಅಳವಡಿಸಿಕೊಳ್ಳಬೇಕಾದರೆ ₹5ರಿಂದ ₹6 ಸಾವಿರ ವೆಚ್ಚ ಮಾಡಬೇಕಾಗುತ್ತದೆ. ಶಿಬಿರದಲ್ಲಿ ಉಚಿತವಾಗಿ ಅಳವಡಿಸಲಾಗುತ್ತದೆ. ಅಗತ್ಯ ಇರುವವರು ಪ್ರಯೋಜನ ಪಡೆದುಕೊಳ್ಳಬೇಕು. ಸಂಪೂರ್ಣ ಅಂಗವೈಕಲ್ಯಕ್ಕೆ ಒಳಗಾದವರಿಗೆ ಮೂರು ಚಕ್ರದ ಬೈಸಿಕಲ್ ವಿತರಿಸಲಾಗುವುದು’ ಎಂದು ವಿವರಿಸಿದರು.</p>.<p>ಭಗವಾನ್ ಮಹಾವೀರ್ ಅಂಗವಿಕಲರ ಸಹಕಾರ ಸಮಿತಿ ಉಸ್ತುವಾರಿ ಅನಿಲ್ ಸುರಾನ್, ಡಾ. ವಿಶ್ವನಾಥ ದೀಪಾಲಿ, ಡಾ. ಲವಿನಾ ಬಲ್ದೋಟ, ಕಾರ್ಯನಿರ್ವಾಹಕ ನಿರ್ದೇಶಕ ಕೆ. ಪ್ರಭು, ಉಪಾಧ್ಯಕ್ಷ ಪ್ರವೀಣ ಸಿಂಗ್, ಮೇಧಾ ವೆಂಕಟೇಶ, ರಮೇಶ, ಬಿ.ಎಂ. ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಎಂ.ಎಸ್.ಪಿ.ಎಲ್. ಹಾಗೂ ಜೈಪುರದ ಭಗವಾನ್ ಮಹಾವೀರ್ ಅಂಗವಿಕಲರ ಸಹಕಾರ ಸಮಿತಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಉಚಿತ ಕೃತಕ ಕಾಲು ಜೋಡಣೆ ಶಿಬಿರ ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ಆರಂಭಗೊಂಡಿತು.</p>.<p>ಶಿಬಿರದ ಮೊದಲ ದಿನವೇ 250 ಜನ ಹೆಸರು ನೋಂದಣಿ ಮಾಡಿಸಿ, ಶಿಬಿರದಲ್ಲಿ ಭಾಗವಹಿಸಿದ್ದರು. ಹುಬ್ಬಳ್ಳಿ, ಬೆಳಗಾವಿ, ರಾಯಚೂರು, ಮೈಸೂರು, ಆಂಧ್ರ ಪ್ರದೇಶದ ಕರ್ನೂಲ್ ಸೇರಿದಂತೆ ವಿವಿಧ ಭಾಗಗಳಿಂದ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.</p>.<p>ಸ್ಥಳದಲ್ಲೇ ಕಾಲಿನ ಅಳತೆ ಪಡೆದು, ಅಲ್ಲಿಯೇ ತಯಾರಿಸುವ ಕೆಲಸ ಮುಂದುವರೆದಿತ್ತು. ಪೋಲಿಯೊ ಸೇರಿದಂತೆ ಇತರೆ ಕಾರಣಗಳಿಂದ ಅಂಗವೈಕಲ್ಯಕ್ಕೆ ಗುರಿಯಾದವರಿಗೆ ಕ್ಯಾಲಿಪರ್ಸ್ಗಳನ್ನು ಅಳವಡಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಇದಕ್ಕೂ ಮುನ್ನ ಎಂ.ಎಸ್.ಪಿ.ಎಲ್. ಬಲ್ದೋಟ ಸಮೂಹ ಸಂಸ್ಥೆಯ ಅಧ್ಯಕ್ಷ ನರೇಂದ್ರ ಬಲ್ದೋಟ ಅವರು ಶಿಬಿರಕ್ಕೆ ಚಾಲನೆ ನೀಡಿದರು. ‘ಸತತ ಎಂಟು ವರ್ಷಗಳಿಂದ ಈ ಶಿಬಿರವನ್ನು ಆಯೋಜಿಸುತ್ತಿದ್ದೇವೆ. ಶಿಬಿರದಲ್ಲಿ ಪಾಲ್ಗೊಳ್ಳುವವರಿಂದ ಯಾವುದೇ ರೀತಿಯ ಶುಲ್ಕ ಪಡೆಯುತ್ತಿಲ್ಲ. ಯಾವ ಭಾಗದವರು, ಯಾರು ಬೇಕಾದರೂ ಶಿಬಿರದಲ್ಲಿ ಭಾಗವಹಿಸಿ ಕೃತಕ ಕಾಲು ಜೋಡಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ಅಂಗವಿಕಲರು ಸ್ವಾವಲಂಬಿಗಳಾಗಿ ಅವರ ಕಾಲ ಮೇಲೆ ಅವರು ನಿಲ್ಲಬೇಕು. ಈ ಹಿಂದಿನ ಶಿಬಿರಗಳಲ್ಲಿ ಭಾಗವಹಿಸಿದವರು ಕೂಡ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆಯಬಹುದು. ಖಾಸಗಿಯಲ್ಲಿ ಕೃತಕ ಕಾಲು ಅಳವಡಿಸಿಕೊಳ್ಳಬೇಕಾದರೆ ₹5ರಿಂದ ₹6 ಸಾವಿರ ವೆಚ್ಚ ಮಾಡಬೇಕಾಗುತ್ತದೆ. ಶಿಬಿರದಲ್ಲಿ ಉಚಿತವಾಗಿ ಅಳವಡಿಸಲಾಗುತ್ತದೆ. ಅಗತ್ಯ ಇರುವವರು ಪ್ರಯೋಜನ ಪಡೆದುಕೊಳ್ಳಬೇಕು. ಸಂಪೂರ್ಣ ಅಂಗವೈಕಲ್ಯಕ್ಕೆ ಒಳಗಾದವರಿಗೆ ಮೂರು ಚಕ್ರದ ಬೈಸಿಕಲ್ ವಿತರಿಸಲಾಗುವುದು’ ಎಂದು ವಿವರಿಸಿದರು.</p>.<p>ಭಗವಾನ್ ಮಹಾವೀರ್ ಅಂಗವಿಕಲರ ಸಹಕಾರ ಸಮಿತಿ ಉಸ್ತುವಾರಿ ಅನಿಲ್ ಸುರಾನ್, ಡಾ. ವಿಶ್ವನಾಥ ದೀಪಾಲಿ, ಡಾ. ಲವಿನಾ ಬಲ್ದೋಟ, ಕಾರ್ಯನಿರ್ವಾಹಕ ನಿರ್ದೇಶಕ ಕೆ. ಪ್ರಭು, ಉಪಾಧ್ಯಕ್ಷ ಪ್ರವೀಣ ಸಿಂಗ್, ಮೇಧಾ ವೆಂಕಟೇಶ, ರಮೇಶ, ಬಿ.ಎಂ. ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>