ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಪ್ರವಾಹದಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವು ನೋವು ಉಂಟಾಗಿದೆ. ಅನೇಕ ಜನ ಆಸ್ತಿ ಕಳೆದುಕೊಂಡಿದ್ದಾರೆ. ಅವರಿಗೆ ನೆರವಿನ ಹಸ್ತ ಚಾಚಲು ನಿರ್ಧರಿಸಲಾಗಿದೆ. ಸಹಕಾರಿ ವತಿಯಿಂದ ಸಂತ್ರಸ್ತರ ನೆರವಿಗೆ ಪರಿಹಾರ ಸಂಗ್ರಹಿಸಲು ಖಾತೆ ತೆರೆಯಲಾಗುವುದು. ಆಸಕ್ತರು ನಮ್ಮ ಬ್ಯಾಂಕು ಅಥವಾ ನೇರವಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಹಣ ಜಮೆ ಮಾಡಬಹುದು. ಅದಕ್ಕಾಗಿ ಯಾವುದೇ ಶುಲ್ಕ ವಿಧಿಸುವುದಿಲ್ಲ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು‘ ಎಂದು ಮನವಿ ಮಾಡಿದರು.