ಸರ್ಕಾರಕ್ಕೆ ಮುಜುಗರವಿಲ್ಲ:‘ಟಿಪ್ಪು ಜಯಂತಿ ಆಚರಿಸಬಹುದು ಎಂದು ಹೈಕೋರ್ಟ್ ನೀಡಿರುವ ಆದೇಶದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಮುಜುಗರವಾಗಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಯಂತಿ ರದ್ದುಗೊಳಿಸುವುದಾಗಿ ಹೇಳಿದ್ದೆವು. ಅದರಂತೆ ತೀರ್ಮಾನ ತೆಗೆದುಕೊಂಡಿದ್ದೇವೆ. ಹಿಂದಿನ ಸರ್ಕಾರ ಜಯಂತಿ ಮಾಡಿದಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಅಂತಹ ಅನಾಹುತಗಳು ಆಗಬಾರದು. ಯಾರಾದರೂ ವೈಯಕ್ತಿಕವಾಗಿ ಜಯಂತಿ ಆಚರಿಸುವುದಾದರೆ ಅಭ್ಯಂತರವಿಲ್ಲ. ಆದರೆ, ಸರ್ಕಾರದಿಂದ ಆಚರಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.