ಹೊಸಪೇಟೆ: ವಿರಾಮದ ನಂತರ ಗುಡುಗಿದ ಮಳೆ

ಹೊಸಪೇಟೆ (ವಿಜಯನಗರ): ಎರಡು ವಾರಗಳ ವಿರಾಮದ ಬಳಿಕ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಗುಡುಗಿದೆ.
ಮಂಗಳವಾರ ರಾತ್ರಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಇನ್ನು, ಹಡಗಲಿ ಪಟ್ಟಣದಲ್ಲಿ ಅನೇಕ ಮನೆಗಳು, ಸರ್ಕಾರಿ ಕಟ್ಟಡಗಳಲ್ಲಿ ನೀರು ಹೊಕ್ಕಿದೆ.
ತಾಲ್ಲೂಕಿನ ಮರಿಯಮ್ಮನಹಳ್ಳಿ, ಕಮಲಾಪುರ, ಹಂಪಿ, ಕಡ್ಡಿರಾಂಪುರ, ಧರ್ಮದಗುಡ್ಡ, ಕೂಡ್ಲಿಗಿ, ಕೊಟ್ಟೂರು ಹಾಗೂ ಹರಪನಹಳ್ಳಿಯಲ್ಲೂ ಉತ್ತಮ ಮಳೆಯಾಗಿದೆ. ಎಲ್ಲೆಡೆ ಉತ್ತಮ ಮಳೆಯಾಗಿರುವುದರಿಂದ ಬಹುತೇಕ ಕಡೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಅಡಿ ನಿರ್ಮಿಸಿರುವ ಬದು, ನಾಲಾ, ಚೆಕ್ ಡ್ಯಾಂಗಳು ಭರ್ತಿಯಾಗಿವೆ.
ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಆರಂಭವಾದ ಗುಡುಗು ಸಹಿತ ಮಳೆ ತಡರಾತ್ರಿಯ ವರೆಗೆ ಸುರಿದಿದೆ. ಉತ್ತಮ ವರ್ಷಧಾರೆಯಿಂದಾಗಿ ಕುಂಠಿತಗೊಂಡಿದ್ದ ಕೃಷಿ ಚಟುವಟಿಕೆಗಳು ಪುನಃ ಬಿರುಸುಗೊಂಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.