ತಾಲ್ಲೂಕಿನ ಗಾಳೆಮ್ಮನಗುಡಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೊಂದರೆ ಅನುಭವಿಸಿದರು. ತಾಲ್ಲೂಕಿನ ಹಂಪಿ, ಕಮಲಾಪುರ, ಸೀತಾರಾಮ ತಾಂಡ, ಬೈಲುವದ್ದಿಗೇರಿ, ಧರ್ಮಸಾಗರ, ರಾಮಸಾಗರ, ಕಾಕುಬಾಳು, ವಡ್ಡರಹಳ್ಳಿ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಕಾರಿಗನೂರು, ವ್ಯಾಸನಕೆರೆ, ಮರಿಯಮ್ಮನಹಳ್ಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.