ಹೊಸಪೇಟೆ: ‘ಅಸಮರ್ಪಕ ಮಳೆಯಿಂದ ಬೆಳೆ ನಷ್ಟವಾಗಿ, ಸಾಲಬಾಧೆಗೆ ತುತ್ತಾಗಿ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಮಂತ್ರಿಯಾಗಲಿ, ಸ್ಥಳೀಯ ಶಾಸಕರಾಗಲಿ ರೈತ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿಲ್ಲ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ ಬೇಸರ ವ್ಯಕ್ತಪಡಿಸಿದರು.