‘ಹಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ಶಿಕ್ಷಣ ನೀಡಬೇಕು. ಅಂಗನವಾಡಿ ನೌಕರರನ್ನು ಐ.ಸಿ.ಡಿ.ಎಸ್ನ ಐದು ಉದ್ದೇಶಗಳಿಗೆ ಮಾತ್ರ ನಿಯೋಜಿಸಬೇಕು. ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಜ. 10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದ್ದು, ರಾಜ್ಯದ ಎಲ್ಲ ಅಂಗನವಾಡಿ ನೌಕರರು ಪಾಲ್ಗೊಳ್ಳುವರು. ಕೋವಿಡ್ ಲಾಕ್ಡೌನ್ ಹೆಸರಿನಲ್ಲಿ ಸರ್ಕಾರ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.