<p><strong>ಹೊಸಪೇಟೆ(ವಿಜಯನಗರ):</strong> ‘ಪ್ರಾಮಾಣಿಕವಾಗಿ ವಾಣಿಜ್ಯ ತೆರಿಗೆ ಭರಿಸುವವರು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಬಗ್ಗೆ ಅನಗತ್ಯ ಭಯ ಪಡುವುದು ಬೇಡ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಬಿ.ವಿ.ಮುರಳಿಕೃಷ್ಣ ತಿಳಿಸಿದರು.</p>.<p>ವಾಣಿಜ್ಯ ತೆರಿಗೆ ಇಲಾಖೆ, ವಿಜಯನಗರ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಸಹಭಾಗಿತ್ವದಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಜಿಎಸ್ಟಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ತೆರಿಗೆ ವಂಚನೆ ಮಾಡುವವರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಜಿಎಸ್ಟಿ ಜೊತೆಗೆ ಇ–ವೇ ಬಿಲ್, ಇ–ಇನ್ವೈಸ್ ಜಾರಿಗೆ ತಂದಿದೆ. ವರ್ತಕರು, ಉದ್ಯಮಿಗಳು ವ್ಯವಹಾರದ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಎಲ್ಲವೂ ಪಾರದರ್ಶಕವಾಗಿ ಮಾಡಿದರೆ ಜಿಎಸ್ಟಿಯಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ’ ಎಂದು ಹೇಳಿದರು.</p>.<p>‘ತೆರಿಗೆ ವಂಚಕರಿಗೆ ಕಡಿವಾಣ ಹಾಕಲು ಭವಿಷ್ಯದ ದಿನಗಳಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಇನ್ನಷ್ಟು ಬದಲಾವಣೆಗಳು ಆಗಬಹುದು. ಕಾಲಕಾಲಕ್ಕೆ ಆಗುವ ಬದಲಾವಣೆ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡಿರಬೇಕು. ತಂತ್ರಜ್ಞಾನದ ಬಳಕೆಯೂ ಗೊತ್ತಿರಬೇಕು. ಇ-ಇನ್ವೈಸಿಂಗ್ ವಿಶ್ವಕ್ಕೆ ಮಾದರಿಯಾಗಿದೆ’ ಎಂದರು.</p>.<p>ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವಿಶ್ವನಾಥ್, ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಅಶ್ವಿನ್ ಕೋತಂಬ್ರಿ, ಪ್ರಧಾನ ಕಾರ್ಯದರ್ಶಿ ಕಾಕುಬಾಳ ರಾಜೇಂದ್ರ, ಕೋಶಾಧ್ಯಕ್ಷ ವಿಜಯ ಸಿಂಧಗಿ, ಟ್ಯಾಲಿ ಸಲ್ಯೂಶನ್ಸ್ನ ಎಜಿಎಮ್ ಸಿ.ಜಿ. ಷಣ್ಮುಖ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ‘ಪ್ರಾಮಾಣಿಕವಾಗಿ ವಾಣಿಜ್ಯ ತೆರಿಗೆ ಭರಿಸುವವರು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಬಗ್ಗೆ ಅನಗತ್ಯ ಭಯ ಪಡುವುದು ಬೇಡ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಬಿ.ವಿ.ಮುರಳಿಕೃಷ್ಣ ತಿಳಿಸಿದರು.</p>.<p>ವಾಣಿಜ್ಯ ತೆರಿಗೆ ಇಲಾಖೆ, ವಿಜಯನಗರ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಸಹಭಾಗಿತ್ವದಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಜಿಎಸ್ಟಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ತೆರಿಗೆ ವಂಚನೆ ಮಾಡುವವರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಜಿಎಸ್ಟಿ ಜೊತೆಗೆ ಇ–ವೇ ಬಿಲ್, ಇ–ಇನ್ವೈಸ್ ಜಾರಿಗೆ ತಂದಿದೆ. ವರ್ತಕರು, ಉದ್ಯಮಿಗಳು ವ್ಯವಹಾರದ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಎಲ್ಲವೂ ಪಾರದರ್ಶಕವಾಗಿ ಮಾಡಿದರೆ ಜಿಎಸ್ಟಿಯಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ’ ಎಂದು ಹೇಳಿದರು.</p>.<p>‘ತೆರಿಗೆ ವಂಚಕರಿಗೆ ಕಡಿವಾಣ ಹಾಕಲು ಭವಿಷ್ಯದ ದಿನಗಳಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಇನ್ನಷ್ಟು ಬದಲಾವಣೆಗಳು ಆಗಬಹುದು. ಕಾಲಕಾಲಕ್ಕೆ ಆಗುವ ಬದಲಾವಣೆ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡಿರಬೇಕು. ತಂತ್ರಜ್ಞಾನದ ಬಳಕೆಯೂ ಗೊತ್ತಿರಬೇಕು. ಇ-ಇನ್ವೈಸಿಂಗ್ ವಿಶ್ವಕ್ಕೆ ಮಾದರಿಯಾಗಿದೆ’ ಎಂದರು.</p>.<p>ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವಿಶ್ವನಾಥ್, ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಅಶ್ವಿನ್ ಕೋತಂಬ್ರಿ, ಪ್ರಧಾನ ಕಾರ್ಯದರ್ಶಿ ಕಾಕುಬಾಳ ರಾಜೇಂದ್ರ, ಕೋಶಾಧ್ಯಕ್ಷ ವಿಜಯ ಸಿಂಧಗಿ, ಟ್ಯಾಲಿ ಸಲ್ಯೂಶನ್ಸ್ನ ಎಜಿಎಮ್ ಸಿ.ಜಿ. ಷಣ್ಮುಖ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>