ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಧನೆಗೈದವರ ಜೀವನ ಕುರಿತಂತೆ ಗುಲ್ಬರ್ಗಾ ವಿವಿ ತನ್ನ ಪಠ್ಯಕ್ರಮಗಳಲ್ಲಿ ಅಳವಡಿಸುತ್ತಾ ಬಂದಿದ್ದು, ಈಗ ‘ನಡುವೆ ಸುಳಿವ ಹೆಣ್ಣು’ ಪುಸ್ತಕವನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕುಲಪತಿ ಪ್ರೊ.ದಯಾನಂದ ಅಗಸರ ಅವರ ಇಚ್ಛಾಶಕ್ತಿ ಕಾರಣ ಎಂದು ವಿವಿಯ ಕಲಾ ನಿಕಾಯದ ಡೀನ್ ಪ್ರೊ. ಎಚ್.ಟಿ.ಪೋತೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.