<p><strong>ಹೊಸಪೇಟೆ:</strong> ನಗರ ಹೊರವಲಯದ ತುಂಗಭದ್ರಾ ಹಿನ್ನೀರಿಗೆ ಹೊಂದಿಕೊಂಡಿರುವ ಗುಂಡಾ ಸಸ್ಯ ಉದ್ಯಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಯೋಜನೆ ರೂಪಿಸಿದೆ.</p>.<p>ತುಂಗಭದ್ರಾ ಜಲಾಶಯದ ಮಗ್ಗುಲಲ್ಲೇ ಇರುವ ‘ಲೇಕ್ ವ್ಯೂವ್’ಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ ಹೇರಲಾಗಿದೆ. ಆ ಜಾಗಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ಕೊಡುತ್ತಿದ್ದರು. ಈಗ ಆ ಪ್ರವಾಸಿಗರನ್ನು ಗುಂಡಾ ಉದ್ಯಾನದತ್ತ ಆಕರ್ಷಿಸಿ, ಆದಾಯ ಹೆಚ್ಚಿಸಿಕೊಳ್ಳುವುದು ಅರಣ್ಯ ಇಲಾಖೆಯ ಉದ್ದೇಶವಾಗಿದೆ.</p>.<p>ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಬೇಕಾದ ಕೆಲಸಗಳು ಈಗಾಗಲೇ ಭರದಿಂದ ನಡೆಯುತ್ತಿವೆ. ಉದ್ಯಾನದೊಳಗೆ ಈ ಹಿಂದೆ ಇದ್ದ ಹಾಸುಗಲ್ಲುಗಳನ್ನು ತೆಗೆದು, ಸುತ್ತಲೂ ಓಡಾಡಲುಪಥ ನಿರ್ಮಿಸಲಾಗಿದೆ. ಮಕ್ಕಳಿಗಾಗಿ ಜೋಕಾಲಿ, ಜಾರುಬಂಡೆ ಸೇರಿದಂತೆ ಇತರೆ ಆಟೋಟಗಳಿಗೆ ವ್ಯವಸ್ಥೆ ಮಾಡಲಾಗಿದೆ. ಕುಳಿತುಕೊಳ್ಳಲು ಹಿನ್ನೀರಿನ ಸಮೀಪ ಸಿಮೆಂಟ್ ಆಸನಗಳನ್ನು ಅಳವಡಿಸಲಾಗಿದೆ. ಊಟಕ್ಕೆ ಕೂರಲು ನಾಲ್ಕು ಪ್ಯಾರಾಗೋಲ ನಿರ್ಮಿಸಲಾಗಿದೆ.</p>.<p>ತಾಲ್ಲೂಕಿನ ಕಲ್ಲಹಳ್ಳಿ–ರಾಜಪುರ ಗ್ರಾಮ ಪಂಚಾಯಿತಿ ನೆರವಿನೊಂದಿಗೆ ‘ಅಕ್ವೇರಿಯಂ’ ನಿರ್ಮಿಸಲಾಗುತ್ತಿದ್ದು, ಇಷ್ಟರಲ್ಲೇ ಕೆಲಸ ಪೂರ್ಣಗೊಳ್ಳಲಿದೆ. ಹಿನ್ನೀರಿನಲ್ಲಿ ಬೋಟಿಂಗ್ ಆರಂಭಿಸಲು ಮುಂದಾಗಿದ್ದು, ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಕೂಡ ಸಲ್ಲಿಸಲಾಗಿದೆ.</p>.<p>‘ಇದೇ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಅವರು ಅರಣ್ಯ ಸಚಿವರಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಉದ್ಯಾನಕ್ಕೆ ಆಹ್ವಾನಿಸಿ, ಅವರೊಂದಿಗೆ ಪರಾಮರ್ಶಿಸಿದ ನಂತರ ಇನ್ನಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ವಲಯ ಅರಣ್ಯ ಅಧಿಕಾರಿ ವಿನಯ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p class="Subhead"><strong>ಪ್ರವಾಸಿಗರ ದಾಂಗುಡಿ: </strong></p>.<p class="Subhead">ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿದ್ದು, ಗುಂಡಾ ಉದ್ಯಾನಕ್ಕೆ ಹಿನ್ನೀರಿನಿಂದ ವಿಶೇಷ ಕಳೆ ಬಂದಿದೆ. ಸುತ್ತಮುತ್ತಲಿನ ಬೆಟ್ಟ ಗುಡ್ಡಗಳು ಹಸಿರು ಹೊದ್ದುಕೊಂಡಿವೆ. ಈ ದೃಶ್ಯ ಕಣ್ತುಂಬಿಕೊಳ್ಳಲು ನಿತ್ಯ ಪ್ರವಾಸಿಗರ ದಂಡು ಉದ್ಯಾನಕ್ಕೆ ಬರುತ್ತಿದೆ.</p>.<p>ಕೊರೊನಾ ಕಾರಣಕ್ಕಾಗಿನಾಲ್ಕೂವರೆ ತಿಂಗಳು ಉದ್ಯಾನದ ಬಾಗಿಲು ಮುಚ್ಚಿತ್ತು. ಇದೇ ಸಮಯದಲ್ಲಿ ಉದ್ಯಾನ ಅಭಿವೃದ್ಧಿ ಪಡಿಸಲಾಗಿದೆ. ಆ. 17ರಿಂದ ಸಾರ್ವಜನಿಕ ಭೇಟಿಗೆ ಉದ್ಯಾನ ಮುಕ್ತಗೊಳಿಸಲಾಗಿದ್ದು, ನಿತ್ಯವೂ ಜನಜಾತ್ರೆ ಕಂಡು ಬರುತ್ತಿದೆ.</p>.<p>‘ಉದ್ಯಾನ ಮುಚ್ಚಿದ್ದಾಗ ಸಹ ಅನೇಕ ಜನ ಹೊರಗಿನಿಂದಲೇ ನೋಡಿಕೊಂಡು ಹೋಗುತ್ತಿದ್ದರು. ಈಗ ಬಾಗಿಲು ತೆಗೆದಿರುವ ವಿಷಯ ಗೊತ್ತಾಗಿ ನಿತ್ಯ 300ರಿಂದ 400 ಜನ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ವಿನಯ್ ತಿಳಿಸಿದ್ದಾರೆ.</p>.<p>ಗುಂಡಾ ಸಸ್ಯ ಉದ್ಯಾನವು ಭೌಗೋಳಿಕವಾಗಿ ಉತ್ತಮ ಜಾಗದಲ್ಲಿದೆ. ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಎಲ್ಲ ಅನುಕೂಲಗಳಿವೆ<br /><strong>-ವಿನಯ್, ವಲಯ ಅರಣ್ಯ ಅಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ನಗರ ಹೊರವಲಯದ ತುಂಗಭದ್ರಾ ಹಿನ್ನೀರಿಗೆ ಹೊಂದಿಕೊಂಡಿರುವ ಗುಂಡಾ ಸಸ್ಯ ಉದ್ಯಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಯೋಜನೆ ರೂಪಿಸಿದೆ.</p>.<p>ತುಂಗಭದ್ರಾ ಜಲಾಶಯದ ಮಗ್ಗುಲಲ್ಲೇ ಇರುವ ‘ಲೇಕ್ ವ್ಯೂವ್’ಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ ಹೇರಲಾಗಿದೆ. ಆ ಜಾಗಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ಕೊಡುತ್ತಿದ್ದರು. ಈಗ ಆ ಪ್ರವಾಸಿಗರನ್ನು ಗುಂಡಾ ಉದ್ಯಾನದತ್ತ ಆಕರ್ಷಿಸಿ, ಆದಾಯ ಹೆಚ್ಚಿಸಿಕೊಳ್ಳುವುದು ಅರಣ್ಯ ಇಲಾಖೆಯ ಉದ್ದೇಶವಾಗಿದೆ.</p>.<p>ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಬೇಕಾದ ಕೆಲಸಗಳು ಈಗಾಗಲೇ ಭರದಿಂದ ನಡೆಯುತ್ತಿವೆ. ಉದ್ಯಾನದೊಳಗೆ ಈ ಹಿಂದೆ ಇದ್ದ ಹಾಸುಗಲ್ಲುಗಳನ್ನು ತೆಗೆದು, ಸುತ್ತಲೂ ಓಡಾಡಲುಪಥ ನಿರ್ಮಿಸಲಾಗಿದೆ. ಮಕ್ಕಳಿಗಾಗಿ ಜೋಕಾಲಿ, ಜಾರುಬಂಡೆ ಸೇರಿದಂತೆ ಇತರೆ ಆಟೋಟಗಳಿಗೆ ವ್ಯವಸ್ಥೆ ಮಾಡಲಾಗಿದೆ. ಕುಳಿತುಕೊಳ್ಳಲು ಹಿನ್ನೀರಿನ ಸಮೀಪ ಸಿಮೆಂಟ್ ಆಸನಗಳನ್ನು ಅಳವಡಿಸಲಾಗಿದೆ. ಊಟಕ್ಕೆ ಕೂರಲು ನಾಲ್ಕು ಪ್ಯಾರಾಗೋಲ ನಿರ್ಮಿಸಲಾಗಿದೆ.</p>.<p>ತಾಲ್ಲೂಕಿನ ಕಲ್ಲಹಳ್ಳಿ–ರಾಜಪುರ ಗ್ರಾಮ ಪಂಚಾಯಿತಿ ನೆರವಿನೊಂದಿಗೆ ‘ಅಕ್ವೇರಿಯಂ’ ನಿರ್ಮಿಸಲಾಗುತ್ತಿದ್ದು, ಇಷ್ಟರಲ್ಲೇ ಕೆಲಸ ಪೂರ್ಣಗೊಳ್ಳಲಿದೆ. ಹಿನ್ನೀರಿನಲ್ಲಿ ಬೋಟಿಂಗ್ ಆರಂಭಿಸಲು ಮುಂದಾಗಿದ್ದು, ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಕೂಡ ಸಲ್ಲಿಸಲಾಗಿದೆ.</p>.<p>‘ಇದೇ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಅವರು ಅರಣ್ಯ ಸಚಿವರಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಉದ್ಯಾನಕ್ಕೆ ಆಹ್ವಾನಿಸಿ, ಅವರೊಂದಿಗೆ ಪರಾಮರ್ಶಿಸಿದ ನಂತರ ಇನ್ನಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ವಲಯ ಅರಣ್ಯ ಅಧಿಕಾರಿ ವಿನಯ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p class="Subhead"><strong>ಪ್ರವಾಸಿಗರ ದಾಂಗುಡಿ: </strong></p>.<p class="Subhead">ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿದ್ದು, ಗುಂಡಾ ಉದ್ಯಾನಕ್ಕೆ ಹಿನ್ನೀರಿನಿಂದ ವಿಶೇಷ ಕಳೆ ಬಂದಿದೆ. ಸುತ್ತಮುತ್ತಲಿನ ಬೆಟ್ಟ ಗುಡ್ಡಗಳು ಹಸಿರು ಹೊದ್ದುಕೊಂಡಿವೆ. ಈ ದೃಶ್ಯ ಕಣ್ತುಂಬಿಕೊಳ್ಳಲು ನಿತ್ಯ ಪ್ರವಾಸಿಗರ ದಂಡು ಉದ್ಯಾನಕ್ಕೆ ಬರುತ್ತಿದೆ.</p>.<p>ಕೊರೊನಾ ಕಾರಣಕ್ಕಾಗಿನಾಲ್ಕೂವರೆ ತಿಂಗಳು ಉದ್ಯಾನದ ಬಾಗಿಲು ಮುಚ್ಚಿತ್ತು. ಇದೇ ಸಮಯದಲ್ಲಿ ಉದ್ಯಾನ ಅಭಿವೃದ್ಧಿ ಪಡಿಸಲಾಗಿದೆ. ಆ. 17ರಿಂದ ಸಾರ್ವಜನಿಕ ಭೇಟಿಗೆ ಉದ್ಯಾನ ಮುಕ್ತಗೊಳಿಸಲಾಗಿದ್ದು, ನಿತ್ಯವೂ ಜನಜಾತ್ರೆ ಕಂಡು ಬರುತ್ತಿದೆ.</p>.<p>‘ಉದ್ಯಾನ ಮುಚ್ಚಿದ್ದಾಗ ಸಹ ಅನೇಕ ಜನ ಹೊರಗಿನಿಂದಲೇ ನೋಡಿಕೊಂಡು ಹೋಗುತ್ತಿದ್ದರು. ಈಗ ಬಾಗಿಲು ತೆಗೆದಿರುವ ವಿಷಯ ಗೊತ್ತಾಗಿ ನಿತ್ಯ 300ರಿಂದ 400 ಜನ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ’ ಎಂದು ವಿನಯ್ ತಿಳಿಸಿದ್ದಾರೆ.</p>.<p>ಗುಂಡಾ ಸಸ್ಯ ಉದ್ಯಾನವು ಭೌಗೋಳಿಕವಾಗಿ ಉತ್ತಮ ಜಾಗದಲ್ಲಿದೆ. ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಎಲ್ಲ ಅನುಕೂಲಗಳಿವೆ<br /><strong>-ವಿನಯ್, ವಲಯ ಅರಣ್ಯ ಅಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>