ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಪೀಠಕ್ಕೆ ಗುರುದರ್ಶನ ಯಾತ್ರೆ

Last Updated 15 ಜುಲೈ 2019, 10:43 IST
ಅಕ್ಷರ ಗಾತ್ರ

ಹೊಸಪೇಟೆ: ಗುರು ಪೌರ್ಣಿಮೆ ಪ್ರಯುಕ್ತ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠಕ್ಕೆ ಕೈಗೊಂಡಿರುವ ಗುರುದರ್ಶನ ಯಾತ್ರೆಗೆ ಸೋಮವಾರ ನಗರದಲ್ಲಿ ಚಾಲನೆ ನೀಡಲಾಯಿತು.

ಉಕ್ಕಡಕೇರಿಯಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಗುಜ್ಜಲ್‌ ಶಿವರಾಮಪ್ಪ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ’ಪ್ರತಿ ವರ್ಷ ಗುರು ಪೌರ್ಣಿಮೆಯ ಪ್ರಯುಕ್ತ ಕೇರಿಯ ಯುವಕರು ರಾಜನಹಳ್ಳಿಗೆ ಹೋಗಿ ಭಜನೆ, ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ವರ್ಷ 60 ಕೇರಿಯ ಯುವಕರು ಹೋಗುತ್ತಿದ್ದಾರೆ’ ಎಂದು ತಿಳಿಸಿದರು.

‘ರಾಜನಹಳ್ಳಿಯಲ್ಲಿ ಪುಣ್ಯಾನಂದಪುರಿ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸುತ್ತಾರೆ. ನಂತರ ಈಗಿನ ಗುರುಗಳಾದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಂದ ದರ್ಶನ ಪಡೆದು, ಹಿಂತಿರುಗುವರು’ ಎಂದು ಹೇಳಿದರು.

ಸಮಾಜದ ಮುಖಂಡರಾದ ಜಂಬಯ್ಯ ನಾಯಕ, ಕಟಗಿ ರಾಮಕೃಷ್ಣ, ಮಾರ್ಕಂಡಯ್ಯ, ಜಿ. ಎಸ್‌. ಕರೆಹನುಮಂತಪ್ಪ, ರಾಮಪುರ ಪರಶುರಾಮ, ಗುಜ್ಜಲ್‌ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT