ಬಳಿಕ ಮಾತನಾಡಿದ ಶಾಸಕ ಭೀಮಾ ನಾಯ್ಕ, ’ಬಳ್ಳಾರಿ ಜಿಲ್ಲೆಯ ಎಲ್ಲಾ ಪಶ್ಚಿಮ ತಾಲ್ಲೂಕುಗಳಿಗೆ ಹಗರಿಬೊಮ್ಮನಹಳ್ಳಿ ಸಮಾನ ಅಂತರದಲ್ಲಿದೆ. ಜಿಲ್ಲಾ ಕೇಂದ್ರ ಮಾಡಿದರೆ ಎಲ್ಲರಿಗೂ ಅನುಕೂಲ. ಒಂದುವೇಳೆ ಹಗರಿಬೊಮ್ಮನಹಳ್ಳಿ ಜಿಲ್ಲಾ ಕೇಂದ್ರ ಮಾಡದಿದ್ದರೆ ಅಖಂಡ ಬಳ್ಳಾರಿ ಜಿಲ್ಲೆ ಹಾಗೆಯೇ ಇರಲಿ. ಈ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತೇನೆ‘ ಎಂದು ತಿಳಿಸಿದರು.