ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿಯಿಂದ ಬನಶಂಕರಿಗೆ ಪಾದಯಾತ್ರೆ

ಹಂಪಿ ಹೇಮಕೂಟ ಮಹಾಸಂಸ್ಥಾನ ಗಾಯತ್ರಿ ಪೀಠದ ದಯಾನಂದ ಪುರಿ ಸ್ವಾಮೀಜಿ ಹೇಳಿಕೆ
Last Updated 13 ಜನವರಿ 2019, 13:37 IST
ಅಕ್ಷರ ಗಾತ್ರ

ಹೊಸಪೇಟೆ: ‘ನೂಲು ಹುಣ್ಣಿಮೆಯ ಪ್ರಯುಕ್ತ ಇದೇ 14ರಂದು ಹಂಪಿಯಿಂದ ನೇಕಾರರ ಕುಲದೈವ ಬಾದಾಮಿಯ ಬನಶಂಕರಿ ಅಮ್ಮನ ಸನ್ನಿಧಿ ವರೆಗೆ ಪಾದಯಾತ್ರೆ ಕೈಗೊಳ್ಳಲಾಗಿದೆ’ ಎಂದು ಹಂಪಿ ಹೇಮಕೂಟ ಮಹಾಸಂಸ್ಥಾನ ಗಾಯತ್ರಿ ಪೀಠದ ದಯಾನಂದ ಪುರಿ ಸ್ವಾಮೀಜಿ ತಿಳಿಸಿದರು.

ಭಾನುವಾರ ಹಂಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ವರ್ಷ ನೂಲು ಹುಣ್ಣಿಮೆಯ ದಿನ ಕುಲದೇವತೆಗೆ ಪೀತಾಂಬರ ಸೀರೆ ಸಮರ್ಪಿಸಿ ಪೂಜಿಸಲಾಗುತ್ತದೆ. ಈ ವರ್ಷ ನೂತನ ಪಲ್ಲಕ್ಕಿಯೊಂದಿಗೆ ಪಾದಯಾತ್ರೆ ಕೈಗೊಳ್ಳಲಾಗಿದೆ. ಹುನಗುಂದ ತಾಲ್ಲೂಕಿನ ಸೂಳೇಭಾವಿ ಶಾಖಂಬರಿ ನೇಕಾರ ಸಹಕಾರ ಸಂಘ ಕೊಡುವ ಪೀತಾಂಬರ ಸೀರೆಯೊಂದಿಗೆ ಬನಶಂಕರಿಗೆ ತೆರಳಿ, 21ರಂದು ವಿಶೇಷ ಪೂಜೆ ನೆರವೇರಿಸಿ ಸಮರ್ಪಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘1904ರಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ನೇಕಾರರು ತಯಾರಿಸಿದ ಮೊದಲ ನೂಲು, ಅಮ್ಮನಿಗೆ ಸಮರ್ಪಿಸುವ ವಾಡಿಕೆ ಇದೆ. ಈ ಸಲ ಮೊದಲ ಬಾರಿಗೆ ಪಾದಯಾತ್ರೆ ಮೂಲಕ ತೆರಳಿ ನೂಲು ಸಮರ್ಪಿಸಲಾಗುವುದು. ನೂರಾರು ಜನ ಈ ಪಾದಯಾತ್ರೆಯಲ್ಲಿ ಭಾಗವಹಿಸುವರು’ ಎಂದರು.

‘ಬನಶಂಕರಿಯಲ್ಲಿ ಮಾರ್ಚ್‌ 3ರಂದು ಶಾಖಾ ಮಠ, ಯಾತ್ರಿ ನಿವಾಸ, ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ. ಜತೆಗೆ 60 ಜೋಡಿಗಳ ಸಾಮೂಹಿಕ ವಿವಾಹ ಜರುಗಲಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ರಾಜ್ಯ ನೇಕಾರರ ಒಕ್ಕೂಟದ ಸಂಘದ ಅಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ದೇವಾಂಗ ಸಮಾಜದ ಮುಖಂಡರಾದ ಪರಗಿ ಶ್ರೀಶೈಲಪ್ಪ, ಗೋಸಿ ಸತೀಶ, ಪರಗಿ ನಾಗರಾಜ, ಅಗಳಿ ಪಂಪಾಪತಿ, ಕಾಳಗಿ ಸುದರ್ಶನ, ಗಣಪತಿ, ಬ್ರಹ್ಮಾನಂದ, ಬಣ್ಣದ ಕೇಮಣ್ಣ, ಕೊಳಗದ ಗಣಪತಿ, ರವೀಂದ್ರ ಕಲಬುರ್ಗಿ, ಪಿ.ಆರ್‌. ಗಿರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT