ಇನ್ನೊಂದೆಡೆ ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೂ ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿಂದಿನಂತೆ ಕಡ್ಡಿರಾಂಪುರ, ಕಮಲಾಪುರದ ಬಳಿ ಪಾರ್ಕಿಂಗ್ಗೆ ಜಾಗ ಗುರುತಿಸಲಾಗಿದ್ದು, ಮುಳ್ಳು, ಕಂಟಿಗಳನ್ನು ತೆರವುಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲ, ಹಂಪಿಗೆ ಸಂಪರ್ಕ ಕಲ್ಪಿಸುವ ಎರಡೂ ಮಾರ್ಗಗಳಲ್ಲಿ ಅಡ್ಡಾದಿಡ್ಡಿಯಾಗಿ ಬೆಳೆದು ನಿಂತಿದ್ದ, ಗಿಡ, ಗಂಟಿಗಳನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಲಾಗುತ್ತಿದೆ.