‘ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ವ್ಯಾಪಾರ ವಹಿವಾಟು ನಡೆಸಲು ಈ ಮಂಟಪಗಳನ್ನು ನಿರ್ಮಿಸಲಾಗಿತ್ತು. ಇದರ ಒಂದು ಬದಿಯಲ್ಲಿ ಈಗ ಪೊಲೀಸ್ ಠಾಣೆ ಕೆಲಸ ನಿರ್ವಹಿಸುತ್ತಿದೆ. ಠಾಣೆಗೆ ಹೊಂದಿಕೊಂಡ ಮಂಟಪದ ಮೇಲ್ಛಾವಣಿ ಕುಸಿದು ಬಿದ್ದಿದೆ. ಇತ್ತೀಚೆಗೆ ಸತತ ಸುರಿದ ಮಳೆಗೆ ನೆನೆದು ಬಿದ್ದಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಆಗಿಲ್ಲ. ಇತರೆ ಸ್ಮಾರಕಗಳೊಂದಿಗೆ ಇದನ್ನೂ ಬರುವ ದಿನಗಳಲ್ಲಿ ಜೀರ್ಣೊದ್ಧಾರಗೊಳಿಸಲಾಗುವುದು’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.