‘ವಿಷ್ಣು ದೇಗುಲದ ಬಳಿ ಭದ್ರತಾ ಸಿಬ್ಬಂದಿ ಇರುವುದಿಲ್ಲ. ಜನ ಕೂಡ ಓಡಾಡುವುದಿಲ್ಲ. ಇದನ್ನೆಲ್ಲ ನೋಡಿಕೊಂಡೇ ಕೃತ್ಯವೆಸಗಿರುವ ಸಾಧ್ಯತೆ ಇದೆ. ವಿಡಿಯೊ ಮೂಲಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಂಪಿಯಲ್ಲಿ ಆಗಾಗ ಇಂತಹ ಘಟನೆಗಳು ಆಗುತ್ತಿದ್ದು, ಅದನ್ನು ತಡೆಯಲು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ (ಎ.ಎಸ್.ಐ.) ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.