<p><strong>ಹೊಸಪೇಟೆ (ವಿಜಯನಗರ)</strong>: ಕೋವಿಡ್–19 ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಜೋಡಿ ರಥೋತ್ಸವ ರದ್ದುಪಡಿಸಲಾಗಿದೆ.</p>.<p>ಏ. 27ರಂದು ಹಂಪಿಯಲ್ಲಿ ವಿರೂಪಾಕ್ಷ ಹಾಗೂ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ನಡೆಯಬೇಕಿತ್ತು. ಸಾವಿರಾರು ಜನ ರಥೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇತ್ತು. ಅಷ್ಟೊಂದು ಸಂಖ್ಯೆಯಲ್ಲಿ ಜನ ಒಂದೆಡೆ ಸೇರಿದರೆ ಕೋವಿಡ್ ಪ್ರಕರಣ ಮತ್ತಷ್ಟು ಏರಿಕೆಯಾಗಬಹುದು ಎಂದು ರದ್ದುಗೊಳಿಸಲಾಗಿದೆ.</p>.<p>‘ಸಾರ್ವಜನಿಕರು ಸೇರಬಹುದಾದ ಸಭೆ, ಸಮಾರಂಭ ಹಾಗೂ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಲಾಗಿದೆ. ಹಂಪಿ ಸ್ಮಾರಕಗಳಿಗೆ ಪ್ರವೇಶ ನಿಷೇಧ ಇರುವುದರಿಂದ ಸಹಜವಾಗಿಯೇ ಪ್ರವಾಸಿಗರು ವಿರೂಪಾಕ್ಷ ದೇವಸ್ಥಾನದ ಕಡೆಗೂ ಸುಳಿಯುತ್ತಿಲ್ಲ’ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ರಾವ್ ತಿಳಿಸಿದ್ದಾರೆ.</p>.<p>‘ಏ. 27ರಂದು ದೇವಸ್ಥಾನದಲ್ಲಿ ಅರ್ಚಕರು ವಿರೂಪಾಕ್ಷ, ಚಂದ್ರಮೌಳೇಶ್ವರ ಸ್ವಾಮೀಜಿಗೆ ಪೂಜೆ ನೆರವೇರಿಸಿ, ಸಾಂಕೇತಿಕವಾಗಿ ಧಾರ್ಮಿಕ ಕಾರ್ಯ ನೆರವೇರಿಸುವರು. ಭಕ್ತರಿಗೆ ನಿಷೇಧವಿದೆ. ಹೋದ ವರ್ಷದಂತೆ ಈ ವರ್ಷವೂ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ಕೋವಿಡ್–19 ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಜೋಡಿ ರಥೋತ್ಸವ ರದ್ದುಪಡಿಸಲಾಗಿದೆ.</p>.<p>ಏ. 27ರಂದು ಹಂಪಿಯಲ್ಲಿ ವಿರೂಪಾಕ್ಷ ಹಾಗೂ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ ನಡೆಯಬೇಕಿತ್ತು. ಸಾವಿರಾರು ಜನ ರಥೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇತ್ತು. ಅಷ್ಟೊಂದು ಸಂಖ್ಯೆಯಲ್ಲಿ ಜನ ಒಂದೆಡೆ ಸೇರಿದರೆ ಕೋವಿಡ್ ಪ್ರಕರಣ ಮತ್ತಷ್ಟು ಏರಿಕೆಯಾಗಬಹುದು ಎಂದು ರದ್ದುಗೊಳಿಸಲಾಗಿದೆ.</p>.<p>‘ಸಾರ್ವಜನಿಕರು ಸೇರಬಹುದಾದ ಸಭೆ, ಸಮಾರಂಭ ಹಾಗೂ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಲಾಗಿದೆ. ಹಂಪಿ ಸ್ಮಾರಕಗಳಿಗೆ ಪ್ರವೇಶ ನಿಷೇಧ ಇರುವುದರಿಂದ ಸಹಜವಾಗಿಯೇ ಪ್ರವಾಸಿಗರು ವಿರೂಪಾಕ್ಷ ದೇವಸ್ಥಾನದ ಕಡೆಗೂ ಸುಳಿಯುತ್ತಿಲ್ಲ’ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ರಾವ್ ತಿಳಿಸಿದ್ದಾರೆ.</p>.<p>‘ಏ. 27ರಂದು ದೇವಸ್ಥಾನದಲ್ಲಿ ಅರ್ಚಕರು ವಿರೂಪಾಕ್ಷ, ಚಂದ್ರಮೌಳೇಶ್ವರ ಸ್ವಾಮೀಜಿಗೆ ಪೂಜೆ ನೆರವೇರಿಸಿ, ಸಾಂಕೇತಿಕವಾಗಿ ಧಾರ್ಮಿಕ ಕಾರ್ಯ ನೆರವೇರಿಸುವರು. ಭಕ್ತರಿಗೆ ನಿಷೇಧವಿದೆ. ಹೋದ ವರ್ಷದಂತೆ ಈ ವರ್ಷವೂ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>