<p><strong>ಹೊಸಪೇಟೆ:</strong> ವಿಜಯನಗರ ಜಿಲ್ಲೆ ರಚನೆ ಸಂಬಂಧ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಬೇಕೆಂದು ಹಂಪಿ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.</p>.<p>ಈ ಸಂಬಂಧ ಬುಧವಾರ ಅವರು ನಗರದಲ್ಲಿ ಪಾದಯಾತ್ರೆ ನಡೆಸಿ, ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>‘ಚಾರಿತ್ರಿಕವಾಗಿ ವಿಜಯನಗರ ಕಾಲವನ್ನು ದಕ್ಷಿಣ ಭಾರತದ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅದರ ಹೆಸರಿನಲ್ಲಿ ಜಿಲ್ಲೆ ರಚನೆ ಮಾಡುವುದು ಸೂಕ್ತ. ಇದರಿಂದ ಪಶ್ಚಿಮ ತಾಲ್ಲೂಕುಗಳ ಜನರಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>‘ಆಡಳಿತದ ಅನುಕೂಲಕ್ಕಾಗಿ ಈ ಹಿಂದೆಯೇ ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳನ್ನು ರಚಿಸಲಾಗಿದೆ. ಅದೇ ರೀತಿ ವಿಜಯನಗರ ಜಿಲ್ಲೆಯಾದರೆ ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಜನರ ಹಿತಕ್ಕಾಗಿ ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p>ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ವೈ.ಯಮುನೇಶ್, ಗುಜ್ಜಲ ನಾಗರಾಜ್, ನಿಂಬಗಲ್ ರಾಮಕೃಷ್ಣ, ಹನುಮಂತಪ್ಪ, ವೆಂಕಟೇಶ್, ಸಣ್ಣ ಮಾರೆಪ್ಪ, ರಮೇಶ್, ವಿಶ್ವನಾಥ ಕೌತಾಳ್, ಅಗಳಿ ಬಾಸ್ಕರ್, ಕೊಳಗದ ಕೀರ್ತಿ, ಆಂಜನೇಯಲು, ಪರಗಿ ಶ್ರೀಶೈಲ, ಸತೀಶ, ಕೊಳಗದ ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ವಿಜಯನಗರ ಜಿಲ್ಲೆ ರಚನೆ ಸಂಬಂಧ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಬೇಕೆಂದು ಹಂಪಿ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.</p>.<p>ಈ ಸಂಬಂಧ ಬುಧವಾರ ಅವರು ನಗರದಲ್ಲಿ ಪಾದಯಾತ್ರೆ ನಡೆಸಿ, ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>‘ಚಾರಿತ್ರಿಕವಾಗಿ ವಿಜಯನಗರ ಕಾಲವನ್ನು ದಕ್ಷಿಣ ಭಾರತದ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅದರ ಹೆಸರಿನಲ್ಲಿ ಜಿಲ್ಲೆ ರಚನೆ ಮಾಡುವುದು ಸೂಕ್ತ. ಇದರಿಂದ ಪಶ್ಚಿಮ ತಾಲ್ಲೂಕುಗಳ ಜನರಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>‘ಆಡಳಿತದ ಅನುಕೂಲಕ್ಕಾಗಿ ಈ ಹಿಂದೆಯೇ ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳನ್ನು ರಚಿಸಲಾಗಿದೆ. ಅದೇ ರೀತಿ ವಿಜಯನಗರ ಜಿಲ್ಲೆಯಾದರೆ ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಜನರ ಹಿತಕ್ಕಾಗಿ ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.</p>.<p>ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ವೈ.ಯಮುನೇಶ್, ಗುಜ್ಜಲ ನಾಗರಾಜ್, ನಿಂಬಗಲ್ ರಾಮಕೃಷ್ಣ, ಹನುಮಂತಪ್ಪ, ವೆಂಕಟೇಶ್, ಸಣ್ಣ ಮಾರೆಪ್ಪ, ರಮೇಶ್, ವಿಶ್ವನಾಥ ಕೌತಾಳ್, ಅಗಳಿ ಬಾಸ್ಕರ್, ಕೊಳಗದ ಕೀರ್ತಿ, ಆಂಜನೇಯಲು, ಪರಗಿ ಶ್ರೀಶೈಲ, ಸತೀಶ, ಕೊಳಗದ ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>