ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿರೂಪಾಕ್ಷ ಹಾಗೂ ಪಂಪಾಂಬಿಕೆಗೆ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿಶೇಷ ಪೂಜೆ ನೆರವೇರಿಸಿದರು. ನಂತರ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮನ್ಮಥ ತೀರ್ಥದ ವರೆಗೆ ಮೆರವಣಿಗೆಯಲ್ಲಿ ತರಲಾಯಿತು. ದೇಗುಲದ ಆನೆ ಲಕ್ಷ್ಮಿ ರಾಜಗಾಂಭೀರ್ಯದಿಂದ ಮುಂದೆ ಹೆಜ್ಜೆ ಹಾಕಿದರೆ, ಅದರ ಹಿಂಭಾಗದಲ್ಲಿ ಮಂತ್ರಘೋಷ, ನಾದಗಳೊಂದಿಗೆ ಉತ್ಸವ ಮೂರ್ತಿಯನ್ನು ಮೆರೆಸಲಾಯಿತು.