ರಜಾ ದಿನವಾಗಿದ್ದರಿಂದ ದೂರದ ಊರುಗಳಿಂದ ಪ್ರವಾಸಿಗರು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಬಂದಿದ್ದರು. ಬಸ್ಸು, ಜೀಪು, ಕಾರುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿಜನ ಬಂದಿದ್ದರು. ವಿಜಯ ವಿಠಲ ದೇಗುಲಕ್ಕೆ ಹೋಗುವ ಕಿರಿದಾದ ಮಾರ್ಗದಲ್ಲಿ ಎದುರು–ಬದುರಾಗಿ ವಾಹನಗಳು ಬಂದು ಸಂಪೂರ್ಣ ಸಂಚಾರ ಸ್ತಬ್ಧಗೊಂಡಿತ್ತು. ವಾಹನ ಸಂಚಾರ ಸುಗಮಗೊಳ್ಳಲು ಎರಡು ಗಂಟೆಗೂ ಅಧಿಕ ಸಮಯ ಹಿಡಿಯಿತು.