ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿಗೆ ಪ್ರವಾಸಿಗರ ದಂಡು: ಸಂಚಾರ ಅಸ್ತವ್ಯಸ್ತ

Last Updated 22 ಡಿಸೆಂಬರ್ 2019, 12:50 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಹಂಪಿಗೆ ಭಾನುವಾರ ಪ್ರವಾಸಿಗರ ದಂಡೇ ಹರಿದು ಬಂದದ್ದರಿಂದ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ರಜಾ ದಿನವಾಗಿದ್ದರಿಂದ ದೂರದ ಊರುಗಳಿಂದ ಪ್ರವಾಸಿಗರು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಬಂದಿದ್ದರು. ಬಸ್ಸು, ಜೀಪು, ಕಾರುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿಜನ ಬಂದಿದ್ದರು. ವಿಜಯ ವಿಠಲ ದೇಗುಲಕ್ಕೆ ಹೋಗುವ ಕಿರಿದಾದ ಮಾರ್ಗದಲ್ಲಿ ಎದುರು–ಬದುರಾಗಿ ವಾಹನಗಳು ಬಂದು ಸಂಪೂರ್ಣ ಸಂಚಾರ ಸ್ತಬ್ಧಗೊಂಡಿತ್ತು. ವಾಹನ ಸಂಚಾರ ಸುಗಮಗೊಳ್ಳಲು ಎರಡು ಗಂಟೆಗೂ ಅಧಿಕ ಸಮಯ ಹಿಡಿಯಿತು.

ಕಂಪ್ಲಿ ಮುಖ್ಯರಸ್ತೆಯಿಂದ ತಳವಾರಘಟ್ಟಕ್ಕೆ ಹೋಗುವ ಮಾರ್ಗದಲ್ಲಿ ಈ ಹಿಂದೆ ಸಂಚಾರ ಪೊಲೀಸರು ನಿಂತು, ಭಾರಿ ವಾಹನಗಳನ್ನು ತಡೆಯುತ್ತಿದ್ದರು. ಆ ವಾಹನಗಳು ವೆಂಕಟಾಪುರ ಮಾರ್ಗವಾಗಿ ವಿಜಯ ವಿಠಲ ದೇಗುಲಕ್ಕೆ ಹೋಗುತ್ತಿದ್ದವು. ಭಾನುವಾರ ಪೊಲೀಸರು ಇರದ ಕಾರಣ ಎಲ್ಲಾ ವಾಹನಗಳು ಯಾವುದೇ ಅಡೆತಡೆಯಿಲ್ಲದೆ ಹೋಗಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT