ನ. 13ರಂದು ಸಂಜೆ ಹಂಪಿ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷ ದೇಗುಲದ ವರೆಗೆ ಮೆರವಣಿಗೆ ನಡೆಯಲಿದೆ. ಜಂಬೂ ಸವಾರಿ ಮಾದರಿಯಲ್ಲಿ ಅಲಂಕರಿಸಿದ ಆನೆಗಳ ಮೆರವಣಿಗೆ ಜರುಗಲಿದೆ. ಜಿಲ್ಲೆಯ ಪ್ರತಿ ತಾಲ್ಲೂಕಿನ ಎರಡು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆ ಮುಗಿದ ನಂತರ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.