ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಉತ್ಸವಕ್ಕೆ ಆಗ್ರಹಿಸಿ ಕಲಾವಿದರ ಪಾದಯಾತ್ರೆ

Last Updated 13 ಜನವರಿ 2019, 7:21 IST
ಅಕ್ಷರ ಗಾತ್ರ

ಹೊಸಪೇಟೆ: ಹಂಪಿ ಉತ್ಸವಕ್ಕೆ ಆಗ್ರಹಿಸಿ ಜಿಲ್ಲೆಯ ವಿವಿಧ ಭಾಗದ ಕಲಾವಿದರು ನಗರದ ರೋಟರಿ ವೃತ್ತದಿಂದ ತಾಲ್ಲೂಕಿನ ಹಂಪಿ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಹಂಪಿ ವೈಭವದ ಕುರಿತು ಹಾಡು ಹಾಡುತ್ತ, ಭಜನೆ ಮಾಡುತ್ತ ಪಾದಯಾತ್ರೆ ಮುಂದುವರಿದಿದೆ.

'ಅತಿವೃಷ್ಟಿ-ಅನಾವೃಷ್ಟಿ ಏನೇ ಆಗಲಿ ಮೈಸೂರು ದಸರಾ ನಿಲ್ಲುವುದಿಲ್ಲ. ಆದರೆ, ಹಂಪಿ ಉತ್ಸವಕ್ಕೆ ಮಾತ್ರ ಸರ್ಕಾರ ಕುಂಟು ನೆಪ ಒಡ್ಡುತ್ತಿದೆ. ಇದು ಸರಿಯಾದ ಧೋರಣೆಯಲ್ಲ. ಸರ್ಕಾರದ ನಿಲುವು ಖಂಡಿಸಿ ಜಿಲ್ಲೆಯ ಎಲ್ಲ ಭಾಗದ ಕಲಾವಿದರು ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ರಂಗಭೂಮಿ ಕಲಾವಿದ ಪಿ.ಅಬ್ದುಲ್ಲಾ ಹೇಳಿದರು.

ಸತತ ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಬರ ಇದೆ. ಹಾಗೇ ನೋಡಿದರೆ ಈ ಸಲ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಕೃಷಿಗೆ ಎರಡನೇ ಬಾರಿಗೆ ನೀರು ಹರಿಸಲಾಗಿದೆ. ಹೀಗಿದ್ದರೂ ಹಂಪಿ ಉತ್ಸವಕ್ಕೆ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದರು.

ಕಲಾವಿದರಾದ ಜಗದೀಶ, ಮಂಜಮ್ಮ ಜೋಗತಿ, ಸಾಲಿ ಸಿದ್ದಯ್ಯ ಸ್ವಾಮಿ, ರಹೀಮಾನ್ ಸಾಬ್, ಹುಲುಗಪ್ಪ, ವೆಂಕಟೇಶ ಇದ್ದಾರೆ.

ಹಂಪಿಗೆ ಪಾದಯಾತ್ರೆ ತಲುಪಿದ ಬಳಿಕ ಅಲ್ಲಿನ ವಿರೂಪಾಕ್ಷೇಶ್ವರ ದೇಗುಲದ ಎದುರು ಭಜನೆ, ಏಕಪಾತ್ರಭಿನಯ ಮೂಲಕ ಪ್ರತಿಭಟನೆ ವ್ಯಕ್ತಪಡಿಸಲು ಕಲಾವಿದರು ನಿರ್ಧರಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT