ಹಂಪಿಯ ರಥಬೀದಿಯಲ್ಲಿ ನಡೆದ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿ, ಚಂದ್ರಮೌಳೇಶ್ವರ ಸ್ವಾಮಿಯ ಜೋಡಿ ರಥೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಕೋವಿಡ್ನಿಂದ ಎರಡು ವರ್ಷ ರಥೋತ್ಸವ ನಡೆದಿರಲಿಲ್ಲ. ಈ ವರ್ಷದ ರಥೋತ್ಸವ ಕಣ್ತುಂಬಿಕೊಳ್ಳಲು ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬಂದಿದ್ದರು.