ಡಿ. 4ರಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 50ರ ಮಾರ್ಗವಾಗಿ ನಗರದ ಕಡೆಗೆ ರೈತನೊಬ್ಬ ಭತ್ತ ಕಟಾವು ಮಾಡುವ ಯಂತ್ರ ತೆಗೆದುಕೊಂಡು ಹೋಗುತ್ತಿದ್ದ. ಈ ವೇಳೆ ಅಲ್ಲಿನ ಚೆಕ್ ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಬಸವರಾಜ, ರೈತನನ್ನು ತಡೆದು ₹100 ತೆಗೆದುಕೊಂಡಿದ್ದಾರೆ. ಅಲ್ಲಿಂದಲೇ ಹಾದು ಹೋಗುತ್ತಿದ್ದ ಸಾಮಾಜಿಕ ಕಾರ್ಯಕರ್ತ ರವಿ ಎಂಬುವರು ಅದನ್ನು ಗಮನಿಸಿ, ಮೊಬೈಲ್ನಲ್ಲಿ ಛಾಯಾಚಿತ್ರ ತೆಗೆದುಕೊಂಡಿದ್ದಾರೆ. ನಂತರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ರೈತನಿಂದ ಪಡೆದಿದ್ದ ಹಣವನ್ನು ಬಸವರಾಜ ವಾಪಸ್ ನೀಡಿದ್ದಾರೆ. ಈ ವಿಷಯ ಗೊತ್ತಾದ ನಂತರ ಎಸ್ಪಿ ಅವರು ಬಸವರಾಜ ಅವರನ್ನು ಅಮಾನತುಗೊಳಿಸಿದ್ದಾರೆ.