‘ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಐವರು ಸದಸ್ಯರಿಗೆ ಆಯುಷ್ಮಾನ್ ಭಾರತ ಯೋಜನೆ ಮೂಲಕ ತಲಾ ₹5 ಲಕ್ಷ ವರೆಗೆ ವಿವಿಧ ಹಂತದ 1,176 ರೋಗಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಬಿಪಿಎಲ್ ಕುಟುಂಬದವರು ಆಯುಷ್ಮಾನ್ ಭಾರತ ಕಾರ್ಡ್ ಪಡೆದು ಯೋಜನೆಯ ಪ್ರಯೋಜನೆ ಪಡೆಯಬೇಕು’ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಅನಿಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಲಕ್ಷ್ಮಿ, ಕನ್ನಡ ವಿ.ವಿ. ಕುಲಸಚಿವ ಎ.ಸುಬ್ಬಣ್ಣ ರೈ, ಚರಿತ್ರೆ ವಿಭಾಗದ ಮುಖ್ಯಸ್ಥ ಚಿನ್ನಸ್ವಾಮಿ ಸೋಸಲೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರ್, ಆರೋಗ್ಯ ಇಲಾಖೆ ಪ್ರಚಾರ ಆಂದೋಲನದ ನಿರ್ದೇಶಕ ರಾಮಾಂಜನೇಯ, ಐ.ಇ.ಸಿ. ವಿಭಾಗದ ಮುಖ್ಯಸ್ಥ ಪ್ರಕಾಶ ಸ್ವಾಮಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಜಿಲ್ಲಾ ಕುಷ್ಠರೋಗ ಮೇಲ್ವಿಚಾರಕ ಎಂ.ಧರ್ಮನಗೌಡ, ಆರು ಜಿಲ್ಲೆಗಳ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, 22 ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.