ಅಂಬೆ ಪ್ರಕಾಶನದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರೌಢದೇವರಾಯ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಶಶಿಧರ್ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಗೀತ ವಿದ್ವಾಂಸ ನಾಗರಾಜ ಪತ್ತಾರ್, ಗೃಹ ರಕ್ಷಕದಳದ ಸಮಾದೇಶ ಅಧಿಕಾರಿ ಎಸ್.ಎಂ.ಗಿರೀಶ್, ಪ್ರಕಾಶನದ ಅಧ್ಯಕ್ಷೆ ಅಂಜಲಿ ಬೆಳಗಲ್, ಸಂಗೀತ ಕಲಾವಿದ ಸಂತೋಷ ಹೊಸಕೋಟೆ, ನೃತ್ಯ ಕಲಾವಿದ ರಾಮಾಲಿ ಇದ್ದರು.