‘ಸದ್ಯದ ಮಟ್ಟಿಗೆ ಯಾವುದೇ ಅಪಾಯ ಇಲ್ಲ. ಒಳ ಹರಿವು ಹೆಚ್ಚಾದಲ್ಲಿ ಕುರುವತ್ತಿ, ಅಂಗೂರು, ಮದಲಗಟ್ಟಿ ಗ್ರಾಮಗಳ ಕೆಲ ಕುಟುಂಬಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುತ್ತೇವೆ. ಮೂರು ಗ್ರಾಮಗಳ ಶಾಲೆಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಂಡಿದ್ದೇವೆ. ಗ್ರಾಮಲೆಕ್ಕಾಧಿಕಾರಿ, ಪಿಡಿಒಗಳು ಕೇಂದ್ರ ಸ್ಥಳದಲ್ಲೇ ಇದ್ದು ಪ್ರವಾಹ ಸ್ಥಿತಿಯ ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಪ್ರತಿಭಾ ತಿಳಿಸಿದರು.